8:08 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಗೌರಿಹಬ್ಬ; ಕಾಫಿನಾಡಿನಲ್ಲಿ ವಿಶೇಷ ಗಂಗಾ ಪೂಜೆ, ಬಾಗಿನ ಸಮರ್ಪಿಸಿದ ಮಹಿಳೆಯರು, ಮಕ್ಕಳು

30/08/2022, 21:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಬಣಕಲ್, ಬಾಳೂರು, ಕೊಟ್ಟಿಗೆಹಾರ ಸುತ್ತಮುತ್ತ ಮಹಿಳೆಯರು, ಮಕ್ಕಳು ವಿಶೇಷ ಗಂಗೆ ಪೂಜೆ ನಡೆಸಿ ಬಾಗಿನ ಅರ್ಪಿಸಿ ಗೌರಿಹಬ್ಬ ಆಚರಿಸಿದರು.

ದೇವನಗೂಲ್ ಗ್ರಾಮದಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಗೃಹಿಣಿ ಯಶೋದಮ್ಮ, ಹಿಂದು ಸಂಪ್ರದಾಯದಲ್ಲಿ ವಿಶೇಷವಾಗಿ ಮಲೆನಾಡಿನ ಭಾಗದಲ್ಲಿ ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬ ಮಹಿಳೆಯರ ಪಾಲಿಗೆ ಶ್ರೇಷ್ಠ ಹಬ್ಬವಾಗಿದೆ. ರಂಗೋಲಿಯ ಚಿತ್ತಾರ, ಸುಮಂಗಲಿಯರಿಗೆ ಹದಿನಾರು ಸುತ್ತಿನ ಗೌರಿ ದಾರ ಪೂಜಿಸಿ ಕೈಗೆ ಕಟ್ಟಿಕೊಳ್ಳುತ್ತಾರೆ. ಗೌರಿ ಹಬ್ಬದಂದು ಸುಮಂಗಲಿಯರಿಗೆ ನೀಡುವ ಬಾಗಿನ ಅತಿ ಶ್ರೇಷ್ಠವಾದುದು. ಅದಕ್ಕೆಂದೇ ಐದು ಮುತ್ತೈದೆಯರಿಗೆ ಈ ದಿನ ಬಾಗಿನ ನೀಡುವ ಸಂಪ್ರದಾಯವಿದೆ. ಅರಿಶಿಣ ಕುಂಕುಮ, ಹಸಿರುಬಳೆ, ಕರಿಮಣಿ ಬಾಚಣಿಗೆ, ಸೀರೆ ಅಥವಾ ಬ್ಲೌಸ್ ಪೀಸ್, ಕಾಯಿ ಹಣ್ಣು ಧಾನ್ಯಗಳನ್ನೊಳಗೊಂಡ ಬಾಗಿನ ನೀಡುವುದರಿಂದ ದಾನ ಮಾಡುವ ಪುಣ್ಯ ಲಭಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ದೇವನಗೂಲ್ ಗ್ರಾಮದ ಗೃಹೀನಿಯರಾದ ಸುಶೀಲಮ್ಮ, ಸೌಮ್ಯ, ಸುಧಾ, ಜಯಂತಿ, ಶ್ವೇತಾ, ಕುಸುಮ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು