9:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಪ್ರಯಾಣಿಕರಿಂದ ತುಂಬಿರುವ ಸರಕಾರಿ ಸಿಟಿ ಬಸ್: ಇದು ಕೊರೊನಾ 3ನೇ ಅಲೆಗೆ ಸಿದ್ಧತೆಯೇ?: ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

25/06/2021, 17:03

ಮಂಗಳೂರು(reporterkarnataka news); ಸ್ಟೇಟ್ ಬ್ಯಾಂಕ್ – ತಲಪಾಡಿ ಸರಕಾರಿ ಬಸ್ ಸೇರಿದಂತೆ ಹಲವು ಕಡೆ ಸಂಚರಿಸುವ ನರ್ಮ್ ಬಸ್ ಗಳು ಬೆಳಗ್ಗೆ ಹಾಗೂ ಸಂಜೆ ವೇಳೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಕೊರೊನಾ 3ನೇ ಅಲೆಗೆ ಇಲ್ಲಿಂದಲೇ ಸಿದ್ಧತೆ ನಡೆಸಿದಾಗೆ ಇದೆ ಎಂದು ಸಾರ್ವಜನಿಕ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಜುಲೈ 1ರ ವರೆಗೆ ಖಾಸಗಿ ಸಿಟಿ ಬಸ್ ಗಳ ಓಡಾಟವಿಲ್ಲದ ಕಾರಣ
ಪ್ರಯಾಣಿಕರು ಸರಕಾರದ ನರ್ಮ್ ಬಸ್ ಗಳನ್ನೇ ಆಶ್ರಯಿಸಬೇಕಾಗಿದೆ. ಇದು ಪ್ರಯಾಣಿಕರ ತಪ್ಪಲ್ಲ, ಸ್ವಂತ ವಾಹನ ಇಲ್ಲದವರು ಯಾವುದೇ ರಿಸ್ಕ್ ತೆಗೆದುಕೊಂಡಾದರೂ ಗಮ್ಯ ಸ್ಥಾನ ಸೇರಲೇ ಬೇಕು. ಜಿಲ್ಲಾಡಳಿತ ಇದಕ್ಕೆ ತಕ್ಕ ವ್ಯವಸ್ಥೆ ಮಾಡಲು ವಿಫಲವಾಗಿರುವುದರಿಂದ ಕೊರೊನಾ ಗೈಡ್ ಲೈನ್ಸ್ ಉಲ್ಲಂಘಿಸಿ ನಾಗರಿಕರು ಪ್ರಯಾಣ ಮಾಡುವ ಪ್ರಮೇಯ ಒದಗಿ ಬಂದಿದೆ.

ತೊಕ್ಕೊಟ್ಟು, ತಲಪಾಡಿ, ಸುರತ್ಕಲ್, ಬೊಂದೇಲ್, ಕಾವೂರು ಮುಂತಾದ ಕಡೆ ಮಾಮೂಲಿಯಾಗಿ ಪ್ರಯಾಣಿಕರ ಸಂಖ್ಯೆಯೂ ಜಾಸ್ತಿ ಇರುತ್ತದೆ. ಹಾಗಾಗಿ ಪ್ರಯಾಣಿಕರ ಸಾಂದ್ರತೆ ಜಾಸ್ತಿ ಇರುವ ರೂಟ್ ಗಳಿಗೆ ನಾಲ್ಕು ಬಸ್ ಜಾಸ್ತಿ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎನ್ನುವುದು ನಾಗರಿಕರ ಅಭಿಪ್ರಾಯ. ಇಲ್ಲದಿದ್ದರೆ ಕೊರೊನಾ 3ನೇ ಅಲೆಗೆ ನಾವೇ ಸಿದ್ಧತೆ ಮಾಡಿದಾಗೆ ಆಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು