6:12 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವೂಟ್ ಸೆಲೆಕ್ಟ್‌ನಲ್ಲಿ ವೀಕ್ಷಿಸಿ ‘ಸಕುಟುಂಬ ಸಮೇತ’  ವಿಶೇಷ ವರ್ಲ್ಡ್ ಡಿಜಿಟಲ್ ಪ್ರೀಮಿಯರ್

06/09/2022, 06:24

*ರಾಹುಲ್ ಪಿ.ಕೆ. ಬರೆದು ನಿರ್ದೇಶಿಸಿದ, ಪರಂವಾಹ್ ಸ್ಟುಡಿಯೋಸ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಿಸಿರುವ ಈ ಚಿತ್ರದಲ್ಲಿ ಭರತ್ ಜಿ.ಬಿ. ಮತ್ತು ಸಿರಿ ರವಿಕುಮಾರ್ ನಟಿಸಿದ್ದಾರೆ.

ಬೆಂಗಳೂರು(reporterkarnataka.com): ವೂಟ್ ಸೆಲೆಕ್ಟ್ ಬಹು ನಿರೀಕ್ಷಿತ ಕನ್ನಡ ಕೌಟುಂಬಿಕ ಚಿತ್ರ ‘ಸಕುಟುಂಬ ಸಮೇತ’ದ ಎಕ್ಸ್‌ಕ್ಲೂಸಿವ್ ವರ್ಲ್ಡ್ ಡಿಜಿಟಲ್ ಪ್ರೀಮಿಯರ್ ಅನ್ನು ಸ್ಟ್ರೀಮ್ ಮಾಡುತ್ತಿದೆ. ಪರಮವಾಹ್ ಸ್ಟುಡಿಯೋಸ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಿಸಿದ ಮತ್ತು ರಾಹುಲ್ ಪಿ.ಕೆ. ಬರೆದು ನಿರ್ದೇಶಿಸಿದ ಈ ಚಲನಚಿತ್ರವು ಭ್ರಾತೃತ್ವದ ಸಂದೇಶವನ್ನು ಶ್ರೇಷ್ಠ ರೀತಿಯಲ್ಲಿ ಸಾರುತ್ತಿದೆ. ‘ಸಕುಟುಂಬ ಸಮೇತ’ದಲ್ಲಿ ಭರತ್ ಜಿ.ಬಿ., ಅಚ್ಯುತ್ ಕುಮಾರ್, ಪುಷ್ಪಾ ಬೆಳವಾಡಿ, ಕೃಷ್ಣ ಹೆಬ್ಬಾಳೆ ಮತ್ತು ಸಿರಿ ರವಿಕುಮಾರ್ ಪ್ರಧಾನ ಭೂಮಿಕೆಯಲ್ಲಿದ್ದಾರೆ. 

ಹಾಸ್ಯಮಯ ಚಿತ್ರವಾಗಿರುವ ‘ಸಕುಟುಂಬ ಸಮೇತ’ ಸಂಬಂಧದ ಸಂಕೀರ್ಣತೆಗಳನ್ನೂ ಅಷ್ಟೇ ಹೃದ್ಯವಾಗಿ ಕಟ್ಟಿಕೊಟ್ಟಿದೆ. ಪ್ರತಿ ಮನೆಯಲ್ಲೂ ಇರಬಹುದಾದ ಪಾತ್ರಗಳು, ಸಂಭವಿಸಬಹುದಾದ ಸನ್ನಿವೇಶಗಳ ಮೂಲಕ ಕಥೆಯು ಕೌಟುಂಬಿಕ ಸಂಬಂಧಗಳ ಸೊಗಸನ್ನು ಸಾರುತ್ತದೆ. 

ಮದುವೆಯಾಗಲು ತವಕಿಸುತ್ತಿರುವ ಸೂರಿಯ ಬದುಕಿನಲ್ಲಿ ಶ್ರದ್ಧಾ ಎಂಬ ಹುಡುಗಿಯ ಪ್ರವೇಶವಾಗುತ್ತದೆ. ಆದರೆ, ಮದುವೆಗೆ ಇನ್ನು ಒಂದು ವಾರ ಇದೆ ಎನ್ನುವಾಗ ಆಕೆ ನಿರಾಕರಿಸುತ್ತಾಳೆ. ಎರಡು ನಿಷ್ಕ್ರಿಯ ಕುಟುಂಬಗಳ ನಡುವೆ ಸಮನ್ವಯಕ್ಕಾಗಿ ಸಭೆ ನಡೆಯುತ್ತದೆ. ಅಲ್ಲಿ ಈಗೋ ಘಾಸಿಗೊಳ್ಳುತ್ತವೆ. ಹೃದಯಗಳು ಮುರಿದು ಹೋಗುತ್ತವೆ. ಈ ನಡುವೆಯೇ ಕೆಲವು ಹೃದಯಗಳ ಗಾಯವೂ ಮಾಯುತ್ತದೆ. ಸುಖಾಂತ್ಯದ ರೋಮ್ಯಾಂಟಿಕ್ ಕಾಮಿಡಿಗಾಗಿ ವೀಕ್ಷಿಸಿ- ವೂಟ್ ಸೆಲೆಕ್ಟ್ . 

ಚಿತ್ರದ ಕುರಿತು ಮಾತನಾಡಿದ ನಟ ಮತ್ತು ನಿರ್ಮಾಪಕ ರಕ್ಷಿತ್ ಶೆಟ್ಟಿ, “ಸಕುಟುಂಬ ಸಮೇತ ಸರಳವಾದ ಚಿತ್ರವಾಗಿದ್ದು, ಕೊನೆಯ ವರೆಗೂ ನಿಮ್ಮನ್ನು ನಗಿಸುತ್ತದೆ. ಲಾಕ್‌ಡೌನ್ ಸಮಯದಲ್ಲಿ ಈ ಪರಿಕಲ್ಪನೆ ಹುಟ್ಟಿಕೊಂಡಿತು. ಪ್ರತಿ ಪಾತ್ರವೂ ಎಷ್ಟು ಸಾಪೇಕ್ಷ ಮತ್ತು ನೈಜವಾಗಿದೆ ಎಂಬ ಅಂಶವೇ ಪ್ರೇಕ್ಷಕರನ್ನು ಬಹುವಾಗಿ ಕಾಡುತ್ತದೆ. ಏಕೆಂದರೆ, ಅಂತಹ ಪಾತ್ರಗಳು ನಮ್ಮ ಸುತ್ತಮುತ್ತ ಸಾಕಷ್ಟಿವೆ.

ನಿರ್ದೇಶಕ ರಾಹುಲ್ ಪಿ.ಕೆ. ಮಾತನಾಡಿ,”ಸಕುಟುಂಬ ಸಮೇತ ಮದುವೆ ಮತ್ತು ಕುಟುಂಬದ ಕುರಿತು ನನ್ನ ವೈಯಕ್ತಿಕ ದೃಷ್ಟಿಕೋನವಾಗಿದೆ. ಸಂಬಂಧಗಳು ಹೇಗೆ ನಿರಂತರ ಬೆಳೆಯುತ್ತಿರುತ್ತವೆ ಮತ್ತು ಬದಲಾಗುತ್ತಿರುತ್ತವೆ ಎಂಬ ಕುರಿತು ಸಂವಾದ ನಡೆಸಲು ನಾನು ಪ್ರಯತ್ನಿಸುತ್ತಿದ್ದೇನೆ” ಎಂದು ಹೇಳಿದರು.

ಸಕುಟುಂಬ ಸಮೇತವನ್ನು ವೀಕ್ಷಿಸಿ, ಇದೀಗ ವೂಟ್ ಸೆಲೆಕ್ಟ್ ನಲ್ಲಿ ಸ್ಟ್ರೀಮಿಂಗ್ ಮಾಡಲಾಗುತ್ತಿದೆ!

ಇತ್ತೀಚಿನ ಸುದ್ದಿ

ಜಾಹೀರಾತು