5:29 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ : 2 ಪದಕ ಗೆದ್ದ ಭಾರತದ ಮೊದಲ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್

15/09/2022, 09:38

ಬೆಲ್‌ಗ್ರೇಡ್(reporterkarnataka.com): ವಿನೇಶ್ ಫೋಗಟ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ 2 ಪದಕಗಳನ್ನು ಜಯಿಸಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಸ್ವೀಡನ್‌ನ ಎಮ್ಮಾ ಜೋನ್ನಾ ಮಾಲ್ಮ್‌ಗ್ರೆನ್‌ರನ್ನು ಮಣಿಸಿದ್ದಾರೆ.

ಬುಧವಾರ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಕಂಚಿಗಾಗಿ ನಡೆದ ಸ್ಪರ್ಧೆಯಲ್ಲಿ 28ರ ಹರೆಯದ ವಿನೇಶ್ 8-0 ಅಂತರದಿಂದ ಜಯ ಸಾಧಿಸಿದರು. ವಿನೇಶ್ 2019ರಲ್ಲಿ ಕಝಕ್‌ಸ್ತಾನದಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕೂಡ ಕಂಚು ಜಯಿಸಿದ್ದರು. ಈ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಸೋತಿದ್ದ ವಿನೇಶ್ ಈ ಗೆಲುವು ಮಹತ್ವ ಪಡೆದಿದೆ.

ಮಂಗಳವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ವಿನೇಶ್ ಮಂಗೋಲಿಯದ ಖುಲನ್ ಬತ್ಖುಯೋಗ್ ವಿರುದ್ಧ ಸೋತಿದ್ದರು. ಖುಲನ್ ಫೈನಲ್‌ಗೆ ತಲುಪಿದ ಕಾರಣ ರಿಪಿಚೇಜ್ ಸುತ್ತಿನ ಮೂಲಕ ಕಂಚಿನ ಪದಕಕ್ಕಾಗಿ ನಡೆದ ಪ್ಲೇ ಆಫ್‌ನಲ್ಲಿ ಆಡುವ ಅವಕಾಶವನ್ನು ವಿನೇಶ್ ಪಡೆದರು. ರಿಪಿಚೇಜ್ ಸುತ್ತಿನಲ್ಲಿ ಕಝಕಿಸ್ತಾನದ ಎಶಿಮೋವಾರನ್ನು 4-0 ಅಂತರದಿಂದ ಸೋಲಿಸಿದ್ದರು.ಅಝರ್‌ಬೈಜಾನ್‌ನ ಎದುರಾಳಿ ಗುರ್ಬನೊವಾ ಗಾಯಗೊಂಡಿದ್ದ ಕಾರಣ ವಿನೇಶ್ ಕಂಚಿನ ಪದಕದ ಸುತ್ತಿಗೆ ತೇರ್ಗಡೆಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು