5:24 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಉದ್ದೀಪನ ಔಷಧ ಸೇವನೆ ಆರೋಪ: ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

20/09/2022, 15:29

ಹೊಸದಿಲ್ಲಿ(Reporterkarnataka.com):ಉದ್ದೀಪನ ಮದ್ದು ಸೇವನೆ ಹಿನ್ನೆಲೆಯ ಆರೋಪದ ಹಿನ್ನೆಲೆಯಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತೆ, ಹಿರಿಯ ಅಥ್ಲೇಟ್ ಎಂ. ಆರ್. ಪೂವಮ್ಮ ಅವರಿಗೆ 2 ವರ್ಷ ನಿಷೇಧ ಹೇರಲಾಗಿದೆ.

ಪಟಿಯಾಲದಲ್ಲಿ ಕಳೆದ ವರ್ಷ ಫೆಬ್ರವರಿ 18ರಂದು ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ ಸಮಯದಲ್ಲಿ ಪೂವಮ್ಮ ಅವರ ಡೋಪ್ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವಿಶ್ವ ಡೋಪಿಂಗ್ ವಿರೋಧಿ ಸಂಸ್ಥೆ ರದ್ದು ಮಾಡಿದ್ದ ಉತ್ತೇಜಕ ಮೀಥೈಲ್‌ ಹೆಕ್ಸಾನಿಯಮೈನ್‌  ತೆಗೆದುಕೊಂಡಿದ್ದು ಪಾಸಿಟಿವ್ ಬಂದ ಹಿನ್ನೆಲೆ ಈ ವರ್ಷದ ಜೂನ್‌ನಲ್ಲಿ ಅವರಿಗೆ ಎಡಿಎಪಿ 3 ತಿಂಗಳ ನಿಷೇಧ ಶಿಕ್ಷೆ ವಿಧಿಸಿತ್ತು . ಅಂದಿನಿಂದ ಅವರು ಸ್ಪರ್ಧಿಸಿದ್ದ ಎಲ್ಲ ಫಲಿತಾಂಶಗಳನ್ನು ಅಮಾನ್ಯಗೊಳಿಸಲಾಗುತ್ತದೆ. ಗೆದ್ದ ಪದಕಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಡಿಎಪಿ ಮುಖ್ಯಸ್ಥ ಅಭಿನವ್ ಮುಖರ್ಜಿ ತಿಳಿಸಿದ್ದಾರೆ.

ಆದರೆ ಈ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (NADA) ಮೇಲ್ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಎಡಿಎಪಿ ಶಿಕ್ಷೆಯನ್ನು ಎರಡು ವರ್ಷಕ್ಕೆ ವಿಸ್ತರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು