6:12 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶಂಕಿತ ಉಗ್ರ ಚಟುವಟಿಕೆ ಹಿನ್ನೆಲೆ ಮಗನ ಬಂಧನ ; ಮಂಗಳೂರಿನಲ್ಲಿ ತಂದೆ ಹೃದಯಾಘಾತದಿಂದ ನಿಧನ

24/09/2022, 00:28

ಮಂಗಳೂರು(reporterkarnataka.com)ಭಯೋತ್ಪಾದಕ ಸಂಘಟನೆ ಐಸಿಸ್ ಜತೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಶಿವಮೊಗ್ಗದಲ್ಲಿ ಬಂಧಿತನಾಗಿದ್ದ ಆರೋಪಿ ಮಾಝ್‌ನ ತಂದೆ ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಶಂಕಿತ ಉಗ್ರ ಮಾಝ್ ಮುನೀರ್ ಅಹಮದ್ ‌ನ ತಂದೆ ಮುನೀರ್ ಅಹ್ಮದ್ ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮೃತ ಮುನೀರ್ ಅಹ್ಮದ್‌ರವರು ತೀರ್ಥಹಳ್ಳಿಯ ಮಾಜಿ ಪುರಸಭಾ ಸದಸ್ಯ ಕಾಂಗ್ರೆಸ್ ಮುಖಂಡ ದಿವಂಗತ ಸಾಬ್ಬಾನ್ ಸಾಹೇಬ್ ಅವರ ಮಗನಾಗಿದ್ದಾರೆ. ಮೃತದೇಹವನ್ನು ರಾತ್ರಿ ತೀರ್ಥಹಳ್ಳಿಗೆ ತೆಗೆದುಕೊಂಡು ಹೋಗಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮುನೀರ್ ಅಹಮ್ಮದ್‌ರವರ ಮನೆ ತೀರ್ಥಹಳ್ಳಿ ಮೀನು ಮಾರ್ಕೆಟ್ ಹತ್ತಿರ ಸೊಪ್ಪುಗುಡ್ಡೆ ಎಂಬಲ್ಲಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಗ್ಗುಲಿನಲ್ಲಿ ಮನೆ ಮಾಡಿ ನೆಲೆಸಿದ್ದರು ಎಂದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆ ಮಗ ಮಾಝ್ ನನ್ನು ಮಂಗಳೂರು ಪೊಲೀಸರು ಗೋಡೆ ಬರಹವೊಂದರ ಆಪಾದನೆಯಲ್ಲಿ ಬಂಧಿಸಿದ್ದಾಗ ಮುನೀರ್ ಅತೀವ ರಕ್ತದೊತ್ತಡಕ್ಕೆ ಸಿಲುಕಿ ಬಳಲಿದ್ದರು. ಆ ಬಳಿಕ ಹೃದಯಕ್ಕೆ ಎರಡು ಸ್ಟಂಟುಗಳನ್ನು ಅಳವಡಿಸಲಾಗಿತ್ತು.

ಈಗ ಮತ್ತೊಮ್ಮೆ ತಮ್ಮ ಮಗನನ್ನು ದೇಶದ್ರೋಹದ ಶಂಕಿತ ಆರೋಪಿ ಎಂದು ಪರಿಗಣಿಸಿ ಕರೆದೊಯ್ಯಲಾಗಿದೆ ಎಂದು ತಿಳಿದ ಬಳಿಕ ವಿಪರೀತವಾಗಿ ನೊಂದಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು