11:54 AM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಅಥಣಿ: ಬಟ್ಟೆ ಬಗೆಯಲು ತೆರಳಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರುಪಾಲು; ಅಗ್ನಿಶಾಮಕ ದಳದಿಂದ ಶೋಧ

28/06/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಟ್ಟೆ ಒಗೆಯಲು ತೆರಳಿದ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಕಾಲು ಜಾರಿ ನೀರು ಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ.

ಮೃತಪಟ್ಟವರನ್ನು ಪರಶುರಾಮ್ ಗೋಪಾಲ್ ಬನಸೊಡೆ, ಸದಾಶಿವ ಗೋಪಾಲ್ ಬನಸೊಡೆ, ಶಂಕರ್ ಗೋಪಾಲ ಬನಸೊಡೆ ಹಾಗೂ ಧರೆಪ್ಪ ಗೋಪಾಲ ಬನಸೊಡೆ ಎಂದು ಗುರುತಿಸಲಾಗಿದೆ. ಈ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಮನೆ ಸಮೀಪದ ಕೃಷ್ಣಾ ನದಿಗೆ ಬಟ್ಟೆ ಒಗೆಯಲೆಂದು ತೆರಳಿದ್ದರು. ನದಿ ದಂಡೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಒಬ್ಬಾತ ಬಿದ್ದಾಗ ಆತನ ರಕ್ಷಣೆಗೆಂದು ಇತರ ಮೂವರು ಸಹೋದರರು ನೀರಿಗೆ ಹಾರಿದ್ದರು. ಈ ನಾಲ್ವರಲ್ಲಿ 


ಒಬ್ಬಾತನಿಗೆ ಮಾತ್ರ ಈಜಲು ಬರುತ್ತಿತ್ತು. ಈಜು ಬಾರದ ಇತರ ಮೂವರು ಸಹೋದರರು ಪ್ರಾಣಭೀತಿಯಿಂದ ಆತನನ್ನು ತಬ್ಬಿಕೊಂಡಿರುವುದರಿಂದ ನಾಲ್ವರು ಸಹೋದರರು ಒಟ್ಟಿಗೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ಅಥಣಿ ತಾಲೂಕ ದಂಡಡಿಖಾರಿ ದುಂಡಪ್ಪ ಕೋಮಾರ ಹಾಗೂ ಅಥಣಿ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳ ಶೋಧ ಶೋಧ ಕಾರ್ಯ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು