2:47 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ವಿಭಜನೆ: ಶೀಘ್ರದಲ್ಲೇ ಕೊಡಗು ವಿವಿ ಅಸ್ತಿತ್ವಕ್ಕೆ

26/09/2022, 23:18

ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ವಿಭಜನೆಯಾಗಲಿದೆ. ಕೊಡಗು ಜಿಲ್ಲೆಯ ಮಂಗಳೂರು ವಿವಿ ವ್ಯಾಪ್ತಿಯಿಂದ ಹೊರಗುಳಿಯಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರ್ಪಡೆಯಾಗಲಿದೆ.

ಇದೀಗ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಸ್ತಿತ್ವದಲ್ಲಿದೆ.

ಇನ್ನು ಮುಂದೆ ಕೊಡಗು ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಅಧಿಕಾರವನ್ನು ಕಳೆದುಕೊಳ್ಳಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರಲಿದೆ.

ಮಂಗಳೂರು ವಿವಿಯಲ್ಲಿ 215 ಕಾಲೇಜುಗಳು ಸಂಯೋಜಿತಗೊಂಡಿದೆ. ಅವುಗಳಲ್ಲಿ 24 ಕಾಲೇಜುಗಳು ಕೊಡಗು ವಿವಿಯ ಪಾಲಾಗಲಿವೆ. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕಳುವಾರದಲ್ಲಿರುವ ಮಂಗಳೂರು ವಿವಿ ಸ್ನಾತಕೊಕೋತ್ತರ ಹಾಗೂ ಸಂಶೋಧನ ಕೇಂದ್ರ ಸೇರಿದಂತೆ ಅಲ್ಲಿನ ಸರಕಾರಿ ಕಾಲೇಜು, ಸಂಯೋಜಿತ ಕಾಲೇಜು, ಸ್ನಾತಕೋತ್ತರ, ಸಂಶೋಧನ ಕೇಂದ್ರವು ಮಂಗಳೂರು ವಿವಿಯಿಂದ ಹೊರಗುಳಿಯಲಿವೆ.

ಕೊಡಗು ಜಿಲ್ಲೆಯಲ್ಲಿರುವ ಕಾಲೇಜುಗಳವರು ವಿಶ್ವವಿದ್ಯಾನಿಲಯಕ್ಕೆ ಹೋಗ ಬೇಕೆಂದರೆ 100 ಕಿ.ಮೀ.ಗೂ ಅಧಿಕ ದೂರದಲ್ಲಿರುವ ಮಂಗಳೂರಿಗೆ ಆಗಮಿಸಬೇಕು. ಪರೀಕ್ಷೆ-ಮೌಲ್ಯಮಾಪನಕ್ಕೂ ಉಪನ್ಯಾಸಕರು ಅತ್ತಿಂದಿತ್ತ ತೆರಳಬೇಕು. ಆ ಹಿನ್ನೆಲೆಯಲ್ಲಿ ಮಡಿಕೇರಿ ಭಾಗಕ್ಕೆ ಪ್ರತ್ಯೇಕವಿ.ವಿ. ಬೇಕೆಂದು ಶಾಸಕ ಅಪ್ಪಚ್ಚು ರಂಜನ್‌ ಆಗ್ರಹಿಸಿದ್ದರಿಂದ 2 ವರ್ಷದ ಹಿಂದೆ ಕೊಡಗು ವಿವಿ ಎಂಬ ಹೊಸ ವಿವಿ ಸ್ಥಾಪನೆಗೆ ಚಿಂತಿಸಲಾಗಿತ್ತು.

ವಿಶಾಲ ವ್ಯಾಪ್ತಿ ಹಾಗೂ ಯೋಗ್ಯ ನಿವೇಶನವಿರುವುದರಿಂದ ಚಿಕ್ಕಳುವಾರದ ಲ್ಲಿರುವ ಮಂಗಳೂರು ವಿವಿ ಸ್ನಾತಕೋತ್ತರ ಹಾಗೂ ಸಂಶೋಧನ ಕೇಂದ್ರವು ಇನ್ನು ಮುಂದೆ ಕೊಡಗು ವಿವಿ ಕ್ಯಾಂಪಸ್‌ ಆಗುವ ಎಲ್ಲ ಸಾಧ್ಯತೆಗಳಿವೆ. ವಿಧಾನಸಭಾ ಅಧಿವೇಶನ ಮುಗಿದ ಅನಂತರ ಉನ್ನತ ಶಿಕ್ಷಣ ಇಲಾಖೆಯು ವಿಶೇಷ ಅಧಿಕಾರಿಯನ್ನು ಇಲ್ಲಿಗೆ ನಿಯೋಜಿಸುವ ಮೂಲಕ ಹೊಸ ವಿವಿ ಸ್ಥಾಪನೆಗೆ ಎಲ್ಲ ಸಿದ್ಧತೆ ಆರಂಭಿಸುವ ಬಗ್ಗೆ ಮಾಹಿತಿ ಲಯಿದೆ. ಈ ಮಧ್ಯೆ ಮಂಗಳೂರು ವಿವಿ ಅಧೀನದಲ್ಲಿರುವ ವಿವಿಧ ಅಧ್ಯಯನ ಪೀಠ ಹಾಗೂ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಯ ಕಾರ್ಯನಿರ್ವಹಣೆ ಬಗ್ಗೆ ಇನ್ನಷ್ಟೇ ಪ್ರಕ್ರಿಯೆ ನಡೆಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು