6:06 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಿನ್ನರಿ ಕಿಂಡರ್‌ಗಾರ್ಟನ್ ಮಕ್ಕಳ ಜತೆ ವಾಯ್ಸ್ ಆಫ್ ಆರಾಧನಾ ನಿರ್ದೇಶಕಿ ಪದ್ಮಶ್ರೀ ಹುಟ್ಟುಹಬ್ಬ

30/09/2022, 11:46

ಮಂಗಳೂರು(reporterkarnataka.com): ವಾಯ್ಸ್ ಆಫ್ ಆರಾಧನಾದ ನಿರ್ದೇಶಕಿ ಹಾಗೂ ಆರದಿರಲಿ ಬದುಕು ಆರಾಧನಾ ತಂಡದ ಪ್ರವರ್ತಕಿ ಪದ್ಮಶ್ರೀ ನಿಡ್ಡೋಡಿ ಅವರ ಹುಟ್ಟುಹಬ್ಬ ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಕಿನ್ನರಿ ಕಿಂಡರ್‌ಗಾರ್ಟನ್ ನ ಮಕ್ಕಳ ಜತೆ ಆಚರಿಸಲಾಯಿತು. ಕಿಂಡರ್‌ಗಾರ್ಟನ್ ನ ಸಹಾಯಕ ಶಿಕ್ಷಕಿ ಸುಜಾತಾ ಅವರಿಗೆ ಈ ಸಂದರ್ಭದಲ್ಲಿ ಜಿನಸಿ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು.


ಹುಟ್ಟುಹಬ್ಬದ ಅಂಗವಾಗಿ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳಿಂದ ಸಂಗೀತ ರಸಮಂಜರಿ ನಡೆಯಿತು. ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. p
ಕಿನ್ನರಿ ಕಿಂಡರ್‌ಗಾರ್ಟನ್ ಪರವಾಗಿ ಮೊದಲು ಪದ್ಮಶ್ರೀ ಅವರ ಹುಟ್ಟುಹಬ್ಬದ ಕೇಕ್ ಕಟ್ ಮಾಡಲಾಯಿತು. ಕಿಂಡರ್‌ಗಾರ್ಟನ್ ನಿರ್ದೇಶಕಿ ಲತಾ ಎ. ಕಲ್ಲಡ್ಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ವಾಯ್ಸ್ ಆಫ್ ಆರಾಧನಾ00l ತಂಡದಿಂದ ಕೇಕ್ ಕಟ್ ಮಾಡಲಾಯಿತು.

ಬಾಲ ಪ್ರತಿಭೆಗಳಾದ ಅಶ್ಮಿತ್ ಎ.ಜೆ., ಅನನ್ಯ ನಾರಾಯಣ. ಯಶಸ್ ಭಟ್ ಮೊದಲಾದವರಿಂದ ಸಂಗೀತ ಸುಧೆ ಹರಿಯಿತು. ವಾಯ್ಸ್ ಆಫ್ ಆರಾಧನಾ ತಂಡದ ಅಭಿಷೇಕ್ ಶೆಟ್ಟಿ ಐಕಳ, ದೀನ್ ರಾಜ್,  ಕೆ. ದೇವಿಪ್ರಸಾದ್, ಬಸವರಾಜ್ ಮಂತ್ರಿ, ಜಯರಾಮ್,  ಜ್ಯೋತ್ಸ್ನಾ, ಆಶಾ, ಪ್ರಸಾದ್, ಕಿನ್ನರಿ ಕಿಂಡರ್‌ಗಾರ್ಟನ್ ನಿರ್ದೇಶಕಿ ಲತಾ ಎ. ಕಲ್ಲಡ್ಕ ಮುಂತಾದವರು ಉಪಸ್ಥಿತರಿದ್ದರು. ಜ್ಯೋತ್ಸ್ನಾ ಕಾರ್ಯಕ್ರಮ ನಿರೂಪಿದರು.

ಇತ್ತೀಚಿನ ಸುದ್ದಿ

ಜಾಹೀರಾತು