1:39 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರೀಡಾ ಕೂಟದಲ್ಲಿ ಜಿಲ್ಲಾಧಿಕಾರಿ

09/10/2022, 23:55

ಮಂಗಳೂರು(reporter Karnataka.com):
ಜಿಲ್ಲೆಯಲ್ಲಿ ಸೌಹಾರ್ದ ಮೂಡಿಸುವ ನಿಟ್ಟಿನ ಬ್ರ್ಯಾಂಡ್ ಮಂಗಳೂ ರು ಪರಿಕಲ್ಪನೆ ಮಾದರಿಯಾಗಿದೆ. ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ, ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಮಂಗಳೂರು ಮಹಾನಗರ ಪಾಲಿ ಕೆಯ ಸಹಭಾಗಿತ್ವದಲ್ಲಿಹಮ್ಮಿಕೊಂಡಿ ರುವ ಬ್ರ್ಯಾಂಡ್ ಮಂಗ ಳೂರು ಸೌಹಾರ್ದ ಕ್ರಿಕೆಟ್ ಪಂದ್ಯವನ್ನು ನಗರದ ಸಂತ ಅಲೋಶಿಯಸ್ ಕಾಲೇಜು ಮೈದಾನದಲ್ಲಿಂದು ಉದ್ಘಾಟಿಸಿ ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು, ಪತ್ರ ಕರ್ತರು ಸಾಕಷ್ಟು ಒತ್ತಡ ಗಳ ನಡುವೆ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸೌಹಾರ್ದ ಕ್ರಿಕೆಟ್ ನಂತಹ ಚಟುವಟಿಕೆಗಳು ಸಹಕಾರಿ ಎಂದು ಶುಭ ಹಾರೈಸಿದರು.
ಉದ್ಘಾಟನಾ ಕಾರ್ಯಕ್ರಮ ದಲ್ಲಿಮುಖ್ಯ ಅತಿಥಿಗಳಾಗಿ ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್ ಮಾತನಾಡುತ್ತಾ, ದ.ಕ ಜಿಲ್ಲೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದೆ ಜೊತೆಗೆ ಪ್ರವಾಸೋದ್ಯಮ ದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಅಭಿವೃದ್ಧಿ ಪಡಿಸಲು ಅವಕಾಶವಿದೆ ಎಂದು ಶುಭ ಹಾರೈಸಿದರು.
ಮಂಗಳೂರು ಮಂಗಳ ಗಂಗೋತ್ರಿ ವಿಶ್ವ ವಿದ್ಯಾನಿ ಲಯ ಕುಲಪತಿ ಪ್ರೊ.ಪಿ.ಎಸ್. ಯಡಪಡಿ ತ್ತಾಯ,ಅಪರ ಜಿಲ್ಲಾ ಧಿಕಾರಿ ಕೃಷ್ಣ ಮೂರ್ತಿ, ರೋಹನ್ ಕಾರ್ಪೊರೇಶನ್ ಮಂಗಳೂರು ಇದರ ಆಡಳಿತ ನಿರ್ದೇಶಕ ರೋಹನ್ ಮೊಂತೆರೋ ಸಮಾರಂಭದಲ್ಲಿ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ(ರಿ)ದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಸಮಾರಂಭದ ಅಧ್ಯಕ್ಷ ತೆ ವಹಿಸಿದ್ದರು.ಸಮಾರಂಭದಲ್ಲಿ ಹಿರಿಯ ಪತ್ರ ಕರ್ತರಾದ ಮನೋಹರ ಪ್ರಸಾದ್ ಪದಾಧಿಕಾರಿ ಗಳಾದ ಜಗನ್ನಾಥ ಶೆಟ್ಟಿ ಬಾಳ, ಹರೀಶ್ ರೈ,ಆರಿಫ್ ಪಡು ಬಿದ್ರೆ, ಪುಷ್ಪ ರಾಜ್ ಬಿ.ಎನ್,ಭಾಸ್ಕರ ರೈ ಕಟ್ಟ ರಾಜೇಶ್ ಪೂಜಾರಿ, ಭರತ್ ರಾಜ್ ,ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.ಪತ್ರ ಕರ್ತರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು