12:35 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಡಾಡಿ ಬಿರುವೆರ್ ಫ್ರೆಂಡ್ಸ್ : ಅಶಕ್ತ ಕುಟುಂಬಗಳಿಗೆ ಧನ ಸಹಾಯ, ಮಕ್ಕಳಿಗೆ ಪುಸ್ತಕ ವಿತರಣೆ

18/10/2022, 23:06

ಬಂಟ್ವಾಳ(reporter Karnataka.com): ಬಿರುವೆರ್ ಫ್ರೆಂಡ್ಸ್ ಮಂಡಾಡಿ ಮತ್ತು ಮಹಾಮ್ಮಾಯಿ ಫ್ರೆಂಡ್ಸ್ ಮಂಡಾಡಿ ಇದರ ಸಹ ಭಾಗಿತ್ವದಲ್ಲಿ ನವರಾತ್ರಿಯ ಶಾರದಾ ಶೋಭಾಯಾತ್ರೆಗೆ ಹುಲಿವೇಷದ ಸ್ತಬ್ಧ ಚಿತ್ರ ಪ್ರದರ್ಶನ ಮಾಡಲಾಯಿತು.

ಬಂದ ಹಣವನ್ನು ಅಶಕ್ತ ಕುಟುಂಬಗಳಿಗೆ ಧನದ ರೂಪದಲ್ಲಿ ಮತ್ತು ಮಕ್ಕಳಿಗೆ ಪುಸ್ತಕದ ರೂಪದಲ್ಲಿ ವಿತರಿಸಲಾಯಿತು.

ಅರ್ಬಿಗುಡ್ಡೆ ನಿವಾಸಿಗಳಾದ ಲೋಕೇಶ ಮತ್ತು ಭವಾನಿ ಅವರ ಪುತ್ರ ಆಯುಷ್ ಎಂಬ ಬಾಲಕನ ವೈದ್ಯಕೀಯ ಚಿಕಿತ್ಸೆಗಾಗಿ ನೆರವನ್ನು ಸಂಸ್ಥೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಸರಕಾರಿ ಪ್ರೌಢಶಾಲೆ ಕೊಯಿಲ ಬಂಟ್ವಾಳ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆಯನ್ನು ಶ್ರೀ ದುರ್ಗಾಂಬಾ ಮಂದಿರ, ಬಿರುವೆರ್ ಫ್ರೆಂಡ್ಸ್ ಮಂಡಾಡಿ,ಮಹಮ್ಮಾಯಿ ಫ್ರೆಂಡ್ಸ್, ಸಹ ಭಾಗಿತ್ವದಲ್ಲಿ ವಿತರಿಸಲಾಯಿತು.
ಮಕ್ಕಳಿಗೆ ಸಿಹಿತಿಂಡಿ ಹಂಚಿ ಮಂದಿರದ ಅರ್ಚಕರಾದ ಪ್ರಶಾಂತ್ ಭಟ್ ರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.


ಶಾಲಾ ಮುಖ್ಯೋಪಾಧ್ಯಾಯರು, ಸಹೋದ್ಯೋಗಿಗಳು, ಬಿರುವೆರ್ ಫ್ರೆಂಡ್ಸ್ ಮಂಡಾಡಿಯ ಕಾರ್ಯದರ್ಶಿ ಅನಿಲ ಪೂಜಾರಿ ಮಂಡಾಡಿ, ಮಹಾಮ್ಮಾಯಿ ಫ್ರೆಂಡ್ಸ್ ನ ಕಾರ್ಯದರ್ಶಿ ಹರೀಶ್, ಪ್ರಶಾಂತ್, ರತೀಶ್, ಕಿರಣ್ , ಸಂತೋಷ್ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು