6:39 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ವೈದ್ಯೋ ನಾರಾಯಣೋ ಹರಿಃ: ಇದಕ್ಕೆ ತಕ್ಕ ಹೆಸರು ಮಂಗಳಾ ಆಸ್ಪತ್ರೆಯ ಸಂಸ್ಥಾಪಕ ಡಾ. ಗಣಪತಿ

01/07/2021, 11:57

ಏಪ್ರಿಲ್ 28, 2021ರ ಬುಧವಾರ ರಾತ್ರಿ 11ರ ಸಮಯ. ಸುಮಾರು ದಿನಗಳಿಂದ ಜ್ವರ ಮೈಕೈನೋವು ಎಂದು ಚಡಪಡಿಸುತ್ತಿದ್ದ ನನ್ನ ಪತ್ನಿ ಹಾಗೂ ಮಗ ಇಬ್ಬರಿಗೂ ಅಂದು ತಡೆಯಲಾರದ ವೇದನೆ. ಇದು ಕೋವಿಡ್ ಎಂದು ಆಗಲೇ ತಿಳಿದಿದ್ದ ನಮಗೆ ಗಾಬರಿ. ಮನೆಯಲ್ಲಿ ಚಿಕ್ಕಮಕ್ಕಳು.  ಸಣ್ಣ ಊರುಗಳಲ್ಲಿ ಸರಿಯಾದ ವ್ಯವಸ್ಥೆ ಇರದ ಕಾರಣ, ದೂರದ ಮಂಗಳೂರು/ ಮಣಿಪಾಲವೇ ಗತಿ. ಆಗ ನಮಗೆ ಸಹಾಯಕ್ಕೆ ಬಂದವರು ಮಂಗಳೂರಿನ ಪ್ರಸಿದ್ಧ, ಮಂಗಳ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್ ನ ಸಂಸ್ಥಾಪಕರಾದ ಡಾ। ಗಣಪತಿ. ವಿಷಯ ತಿಳಿದ ಕೂಡಲೇ ತಮ್ಮ ಸಂಸ್ಥೆಯ ಅಂಬುಲೆನ್ಸ್ ಅನ್ನು ಕಾರ್ಕಳದಲ್ಲಿರುವ ನಮ್ಮ ಮನೆಗೆ ಕಳುಹಿಸಿ ಆಸ್ಪತ್ರೆಗೆ ದಾಖಲಿಸಿ ನುರಿತ ವೈದ್ಯರ ತಂಡದ ಸಹಾಯದೊಂದಿಗೆ ಸೂಕ್ತ ಚಿಕಿತ್ಸೆಯನ್ನು ಕೊಟ್ಟರು. ತೀವ್ರ ನಿಗಾ ವಹಿಸಿದ ಪರಿಣಾಮ, ಕೇವಲ ಎರಡೇ ದಿನಗಳಲ್ಲಿ ಸೋಂಕು ಕಡಿಮೆಯಾಯಿತು. ನನ್ನಂತಹ  ಸಾವಿರಾರು ಫಲಾನುಭವಿಗಳ ಭಾವನೆಗಳ ಸಂಕೇತವಾಗಿರುವ ಈ ನಮನಗಳು ಡಾ. ಗಣಪತಿ ಹಾಗೂ ಅವರ ಎಲ್ಲ ಸಿಬ್ಬಂದಿ ವರ್ಗಕ್ಕೆ  ಹಾಗೂ ಸಮಸ್ತ ವೈದ್ಯ ಲೋಕಕ್ಕೆ ಸಮರ್ಪಿತ. 

ವೈದ್ಯೋ ನಾರಾಯಣೋ ಹರಿಃ 

ಇತ್ತೀಚಿನ ಸುದ್ದಿ

ಜಾಹೀರಾತು