11:09 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ, ಕ್ಯಾಂಪಸ್ ನೇಮಕಾತಿ

13/11/2022, 10:50

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕ, ಅಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಂಗಳೂರಿನ ಎನ್. ಐ. ಐ. 1 ಇವುಗಳ ಸಹಯೋಗದೊಂದಿಗೆ ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ಕ್ಯಾಂಪಸ್‌ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ರವರು “ವಿದ್ಯಾರ್ಥಿಗಳು ನಮ್ಮ ಜೀವನದಲ್ಲಿ ಪವಾಡಗಳು ನಡೆಯುತ್ತವೆ ಎಂದು ಕಾಯುತ್ತಾ ಕುಳಿತುಕೊಳ್ಳುವ ಬದಲು ತಮ್ಮ ಗೌಶಲಗಳನ್ನು ಅಭಿವೃದ್ಧಿಗೊಳಿಸುವತ್ತ ಗಮನಹರಿಸಬೇಕಾದುದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಅಗತ್ಯವಾಗಿದೆ. ಪರಿಸ್ಥೆಯಲ್ಲಿ ಪಡೆದ ಅಂಕಗಳು ಪ್ರವೇಶ ಪರೀಕ್ಷೆಗಳಿಗೆ ಆತನ ಮರೆಯುವಲ್ಲಿ ಸಹಕಾರಿಯಾದರೆ ನಮ್ಮಲ್ಲಿರುವ ಗೌಗಲಗಳು ಉದ್ಯೋಗ ಪಡೆಯಲು ಸಕಾರಿಯಾಗುತ್ತವೆ” ಎಂದು ಹೇಳಿದರು.

ಎಸ್. ಐ. ಐ. ಟಿ. ಮಂಗಳೂರು ಶಾಖೆಯ ವಿದ್ಯಾರ್ಥಿ ಸಮಾಲೋಚಕರಾದ ಶ್ರೀಮತಿ ಸಿಗ‌ ರವರು ಬ್ಯಾಂಕಿಂಗ್ ಕ್ಷೇತ್ರದಲ್ಲಿನ ವಿಪುಲ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎನ್.ಐ.ಟಿ. ಮಂಗಳೂರು ಶಾಖೆಯ ಶೈಕ್ಷಣಿಕ ಸಲಹೆಗಾರರಾದ ಕು. ಶೀತಲ್ ರವರು ಉಪಸ್ಥಿತರಿದ್ದರು.

ರಚಿತಾ ಮತ್ತು ಬಳಗ ಪ್ರಾರ್ಥಿಸಿದರು. ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕದ ಸಂಚಾಲಕರಾದ ಡಾ. ರಾಧಾಕೃಷ್ಣ ಗೌಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾದಾನ ವಿಭಾಗದ ಪ್ರಾಧ್ಯಾಪಕರಾದ ಲೆ. ಜೋನ್ಸನ್ ಡೇವಿಸ್ ಸಿಲ್ವೇರಾ ವಂದಿಸಿದರು, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಗೀತಾ, ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು