5:29 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೋಟ್ಯಂತರ ರೂಪಾಯಿ ವಂಚನೆ ಆರೋಪ:ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ

02/07/2021, 12:21

ಬೆಂಗಳೂರು(reporterkarnataka news): ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಅವರ ಬಂಧನವಾಗಿದೆ. ನೌಕರಿ ಕೊಡಿಸುವ, ವರ್ಗಾವಣೆ ಮಾಡಿಸುವ ನೆಪ ಹೇಳಿ ಕೋಟ್ಯಂತರ ರೂ. ವಂಚಿಸಿದ ಆರೋಪದ ಮೇಲೆ ಬಂಧನ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂಧನ ನಡೆದಿದೆ.

ರಾಜಣ್ಣ ಅವರನ್ನು ಬೆಂಗಳೂರನಲ್ಲಿ ಸಚಿವ ಶ್ರೀರಾಮುಲು ಮನೆಯಿಂದ ಸಿಸಿಬಿ ತಂಡ ಬಂಧಿಸಿದೆ. ಸಚಿವರು ಕೂಡ ಆ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.

ರಾಜಣ್ಣ ಸಚಿವ ಶ್ರೀರಾಮುಲು ಜತೆಗೆ ವಿಜಯೇಂದ್ರ ಅವರ ಹೆಸರನ್ನು ಕೂಡ ದುರ್ಬಳಕೆ ಮಾಡುತ್ತಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ದಸ್ತಗಿರಿ ಮಾಡಲಾಗಿದೆ.

ರಾಜಣ್ಣ ನೌಕರಿ ಹಾಗೂ ಅಧಿಕಾರಿಗಳಿಗೆ ವರ್ಗಾವಣೆ ಆಮಿಷಯೊಡ್ಡಿ ಕೋಟ್ಯಂತರ ಹಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಎರಡು ದಿನಗಳ ಹಿಂದೆ ರಾಜಣ್ಣ ವಿರುದ್ಧ ಎಫ್‌ಐಆರ್​ ದಾಖಲಾಗಿತ್ತು. ಗುರುವಾರ  ಬೆಳಗ್ಗೆಯಿಂದ  ಸಿಸಿಬಿ ಪೊಲೀಸರು ಹೊಂಚು ಹಾಕಿ ಇಂದು ರಾಜಣ್ಣ ಅವರನ್ನು ಬಂಧಿಸಿದ್ದಾರೆ.

ರಾಜಣ್ಣ ಅವರು ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಹೆಸರಲ್ಲಿಯೂ ಕೂಡ ವಂಚನೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಖುದ್ದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಾಮುಲು ಪಿಎ ವಿರುದ್ಧ ದೂರು ನೀಡಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು