2:17 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಲಿಂಗಸುಗೂರು: ಕಂದಾಯ ದಿನಾಚರಣೆಯಲ್ಲಿ ಹಸಿರೋತ್ಸವ ಸಂಭ್ರಮ

02/07/2021, 17:44

ಅಮರೇಶ್ ಲಿಂಗಸುಗೂರು

info.reporterkarnataka@gmail.com

ಲಿಂಗಸೂಗುರು ಮಿನಿ ವಿಧಾನಸೌಧದಲ್ಲಿ ತಾಲೂಕು ಕಂದಾಯ ಇಲಾಖೆ ವತಿಯಿಂದ ಕಂದಾಯ ದಿನಾಚರಣೆ 2021ನ್ನು ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಈ ಬಾರಿ ವಿಶೇಷವಾಗಿ ‘ಹಸಿರೋತ್ಸವ’ ಎಂಬ ಧ್ಯೇಯ ವಾಕ್ಯದ ಸಂಕಲ್ಪದೊಂದಿಗೆ ಸಸಿ ನೆಟ್ಟು ನೀರು ಹಾಕುವ ಮೂಲಕ ಅರ್ಥ ಆಚರಿಸಲಾಯಿತು. 

ಕಾರ್ಯಕ್ರಮವನ್ನು ಉದ್ದೇಶಿಸಿ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಮಾತನಾಡಿ,ಕಂದಾಯ ಇಲಾಖೆ ಅಂತ ಹೆಸರು ಬರೊದಕ್ಕೆ ಮೂಲ ಕಾರಣ ಇಲಾಖೆಯಿಂದ ಆದಾಯ ಬರುತ್ತಿತ್ತು. ಹಾಗಾಗಿ ಕಂದಾಯ ಇಲಾಖೆ ಅಂತ ಕರೆದರು. ಆದರೆ ಅದು ಇಂದು ಮಹತ್ವವನ್ನು ಕಳೆದುಕೊಂಡಿದೆ ಎಂದು ಹೇಳಿದರು. ಕಾರ್ಯಕ್ರಮದ ಕುರಿತು ತಹಶೀಲ್ದಾರ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಲಿಂಗಸೂಗೂರು ಉಪವಿಭಾಗದ ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್ ಚಾಮರಾಜ ಪಾಟೀಲ್, ಗ್ರೆಡ್ 2 ತಹಶೀಲ್ದಾರ್ ಬಿ.ಜಿ.ಜಳಕಿಮಠ, ಗುರುಗುಂಟಾ ಉಪ ತಹಶೀಲ್ದಾರ್ ರಂಗಪ್ಪ ನಾಯಕ ,ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ರಾಮಕೃಷ್ಣ, ಕಂದಾಯ ನಿರೀಕ್ಷಕರಾದ ರಾಘವೇಂದ್ರ ಗ್ರಾಮ ಲೆಕ್ಕಾಧಿಕಾರಿ ಗಳ ಸಂಘದ ತಾಲ್ಲೂಕು ಅಧ್ಯಕ್ಷ ಅಮರೇಶ ರಾಠೋಡ್  ಸೇರಿದಂತೆ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು