7:22 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೋಲಾರ: ರಕ್ತ ಚಂದನ, ಶ್ರೀಗಂಧ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿ ಅಭಿಯಾನ 

04/07/2021, 09:10

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

Info.reporterkarnataka@gmail.com

ರಕ್ತ ಚಂದನ ಗಿಡಗಳನ್ನು ಸಂರಕ್ಷಣಾಭಿವೃದ್ಧಿ ಮಾಡಿ. ಕೆರೆಗಳ ಪಕ್ಕದಲ್ಲಿರುವ ಜಲಚರ ಗಿಡಗಳು ಮತ್ತು ಕೆರೆಗಳಲ್ಲಿರುವ ಜಲಚರ ಪ್ರಾಣಿಗಳನ್ನು ಉಳಿಸಿಕೊಂಡು ಕೆರೆಗಳ ಸ್ವರೂಪ ಕಾಪಾಡಿಕೊಂಡು ಅರಣ್ಯ ರಕ್ಷಣೆ ಮಾಡಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು. 

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅರಣ್ಯ ಜೀವವೈವಿಧ್ಯ ಪರಿಸರ , ಕೆರೆ ಸಂರಕ್ಷಣೆ ಕುರಿತು ಸಮಾಲೋಚನೆ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸುಂದರೀಕರಣ ಎಂಬ ಕಾರ್ಯಕ್ರಮದ ಮೂಲಕ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ರಕ್ತ ಚಂದನ ಮತ್ತು ಶ್ರೀಗಂಧ ನೈಸರ್ಗಿಕವಾಗಿ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿಯಲ್ಲಿ ಅಭಿಯಾನ ಮಾಡಲಾಗುವುದು. ಚೌಗು ಪ್ರದೇಶಗಳ ರಕ್ಷಣೆ ಮಾಡಿ ಹಾಗೂ ಅವುಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು. 
ಪಂಚಾಯತ್ ರಾಜ್ , ನಗರಸಭೆ , ಅರಣ್ಯ ಇಲಾಖೆಗಳು ಸೇರಿ ಹಲವು ಇಲಾಖೆಗಳು ಮುಂದಾಗಿ ಕೆರೆಗಳ ಅಭಿವೃದ್ಧಿಗೆ ಕೈಜೋಡಿಸಿ ಜಿಲ್ಲೆಯನ್ನು ಜೀವ ವೈವಿಧ್ಯತೆಯ ಜಿಲ್ಲೆಯನ್ನಾಗಿಸಬೇಕು . ಕೋಲಾರದ ಅಂತರಗಂಗೆ ಮತ್ತು ಶ್ರೀನಿವಾಸಪುರದ ರಾಯಲ್ಪಾಡು ಹತ್ತಿರವಿರುವ ಬೆಟ್ಟ , ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಹೆಚ್ಚಿನ ಆದ್ಯತೆ ಕೊಟ್ಟು ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು