5:22 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ!: ಗಾಜಿನ ಚಾವಣಿಯಬೆಂಗಳೂರು- ಮಂಗಳೂರು ಟ್ರೈನ್ ಜು.7ರಂದು ಆರಂಭ

04/07/2021, 19:13

ಮಂಗಳೂರು(reporterkarnataka news): ಶಿರಾಡಿ ಘಾಟಿಯ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಬೆಂಗಳೂರು- ಮಂಗಳೂರು ರೈಲು ಸಂಚಾರ ಜುಲೈ 7ರಿಂದ ಆರಂಭವಾಗಲಿದೆ.

ಬೆಂಗಳೂರು- ಮಂಗಳೂರು ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಬೋಗಿಗಳನ್ನು ಜೋಡಿಸಲಾಗುತ್ತದೆ. ಇದರಿಂದ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ 56 ಕಿಮೀ. ಉದ್ದದ ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯ, ನದಿ, ತೊರೆ, ಜಲಪಾತಗಳು ಸೊಬಗನ್ನು ಪ್ರಯಾಣಿಕರು ಆಸ್ವಾದಿಸಬಹುದಾಗಿದೆ.

ಗಾಜಿನ ಚಾವಣಿಯ ಬೋಗಿಯೊಳಗೆ 360 ಡಿಗ್ರಿಯಲ್ಲಿ ಸುತ್ತುವ ಆಸನದ ವ್ಯವಸ್ಥೆ ಅಳವಡಿಸಲಾಗಿದೆ. ಪಾರದರ್ಶಕ ಗಾಜಿನ ಕೋಚ್ ಆಗಿರುವುದರಿಂದ ಪ್ರಯಾಣಿಕರು ತನ್ನ ಇಕ್ಕಲೆಗಳ ಪ್ರಕೃತಿ ಸೊಬಗಿನ ಜತೆಗೆ ಎತ್ತರದ ಬೆಟ್ಟ, ಗಿರಿ, ಕಾನನ ಹಾಗೂ ಜಲಪಾತಗಳ ವೈಭವವನ್ನು ಕುಳಿತಲ್ಲೇ ಸವಿಯಬಹುದಾಗಿದೆ. ಬೋಗಿಯಲ್ಲಿ ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆ, ಮೈಕ್ರೋ ಓವೆನ್, ಸಣ್ಣ ಫ್ರಿಡ್ಜ್ ಮತ್ತು ಎಸಿ ಸೌಲಭ್ಯವಿರುತ್ತದೆ. ಟಿಕೆಟ್ ದರ 1470 ರೂ. ನಿಗದಿಪಡಿಸಲಾಗಿದೆ. ಮೊದಲ ರೈಲು ಜುಲೈ 7ರಂದು ಯಶವಂತಪುರ ಜಂಕ್ಷನ್ ನಿಂದ ಹೊರಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು