2:56 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Mangalore | ವಿಮಾನ ಹಾರುವ ರನ್‌ವೇಗೆ ಅಚಾನಕ್ ಆಗಿ ನುಗ್ಗಿದ ಲಾರಿ ಕ್ಲೀನರ್ : ಸಿಐಎಸ್‌ಎಫ್ ಸಿಬ್ಬಂದಿಗಳಿಂದ ಬಂಧನ

06/07/2021, 18:27

ಮಂಗಳೂರು (reporterkarnataka news): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿಗಳು ಪೊಲೀಸರಿಗೊಪ್ಪಿಸಿದ್ದಾರೆ. ನಂತರ ಈತ ದಾರಿ ತಪ್ಪಿ ಪ್ರವೇಶಿಸಿದ ಹೊರ ರಾಜ್ಯದ ಲಾರಿ ಕ್ಲಿನರ್ ಎಂದು ತಿಳಿದು ಬಂದಿದೆ.

ಸೋಮವಾರ ರಾತ್ರಿ 11ರ ವೇಳೆಗೆ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ‌ ರನ್ ವೇ ಕಾಮಗಾರಿ ನಡೆಯುತ್ತಿತ್ತು. ಆ ವೇಳೆಯಲ್ಲಿ ಅಪರಿಚಿತ ವ್ಯಕ್ತಿ ಅಕ್ರಮವಾಗಿ ಪ್ರವೇಶಿಸಿರುವುದು ಕಂಡು ಬಂತು. ತಕ್ಷಣ ಆತನನ್ನು ಗಸ್ತು ತಿರುಗುತ್ತಿದ್ದ ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಬಜಪೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅನಧಿಕೃತವಾಗಿ ನುಗ್ಗಿದ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಪಶ್ಚಿಮ ಬಂಗಾಲದ ಮುರ್ಸಿದಾಬಾದ್ ನ ಬಧುಹಾ ಗ್ರಾಮ ದ ನಿವಾಸಿ ರಾಕೇಶ್ ಎಂದು ಹೇಳಿಕೊಂಡಿದ್ದಾನೆ. ಈತ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು, ತನ್ನ ಜೊತೆ ಇದ್ದ ಲಾರಿ ಡ್ರೈವರ್ ತನಗೆ ಸಂಬಳ ನೀಡದೆ ಇಲ್ಲೇ ಸಮೀಪದಲ್ಲಿ ಬಿಟ್ಟು ಹೋಗಿದ್ದು ದಾರಿ ಕಾಣದೇ ವಿಮಾನ ನಿಲ್ದಾಣ ಎಂದು ತಿಳಿಯದೇ ಈ ಭಾಗಕ್ಕೆ ಬಂದಿರುತ್ತೇನೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು