2:29 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಸಚಿವ ಸುನಿಲ್ ಕುಮಾರ್ ಕಾರ್ಕಳದಿಂದಲೇ ಸ್ಪರ್ಧೆ: ವಿಜಯಪುರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ

04/02/2023, 22:26

ವಿಜಯಪುರ(reporterkarnataka.com):: ಮುಂಬರುವ ವಿಧಾನಸಭೆ ಚುನಾವಣೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅವರು ಕಾರ್ಕಳ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. ಎಲ್ಲ 224 ಕ್ಷೇತ್ರದಲ್ಲಿಯೂ ಬಿಜೆಪಿ ಸ್ಪರ್ಧಿಸಲಿದೆ ಎಂದು ಶ್ರೀರಾಮ ಸೇನೆಯ ಆಗ್ರಹಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಖಡಕ್ ಉತ್ತರ ನೀಡಿದ್ದಾರೆ.

ಕಾರ್ಕಳ ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕದೇ ಪ್ರಮೋದ್ ಮುತಾಲಿಕ್ ಅವರನ್ನು ಬೆಂಬಲಿಸುವಂತೆ ಬಿಜೆಪಿ ನಾಯಕರನ್ನು ಶ್ರೀರಾಮಸೇನೆ ಒತ್ತಾಯಿಸಿದೆ. ಆದರೆ ನಮ್ಮದು ರಾಷ್ಟ್ರೀಯ ಪಕ್ಷ, ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕುತ್ತೇವೆ. ಕಾರ್ಕಳದಲ್ಲಿ ಸಚಿವ ಸುನೀಲ್ ಕುಮಾರ್ ಅವರು ಮೂರು ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಮಂತ್ರಿ ಕೂಡ ಆಗಿದ್ದಾರೆ. ಶ್ರೀರಾಮ ಸೇನೆಯವರು ಮನವಿ ಮಾಡಿದ್ದಾರೆ. ಇದು ಸಹಜ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಉತ್ತರಿಸಿದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಗ್ಗೆ ಡಾ.ಪರಮೇಶ್ವರ್
ಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅದು ಅವರ ಆಂತರಿಕ ವಿಚಾರ. ಪರಮೇಶ್ವರ್ ಬಹಳ ಬುದ್ದಿವಂತರು. ಎಲ್ಲವನ್ನೂ ಅರಿತವರು. ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಶಾಸಕರನ್ನು ಭದ್ರ ಮಾಡಿಕೊಳ್ಳಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾನು ಅವರಿಗೆ ಇಷ್ಟೇ ಸಲಹೆ ನೀಡಲು ಸಾಧ್ಯ ಎಂದು ಬೊಮ್ಮಾಯಿ ಸಿದ್ದರಾಮಯ್ಯ ಅವರನ್ನು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು