8:34 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಎರ್ಮೆಮಜಲು ಯುವ ಕೇಸರಿ ಭವನ ಲೋಕಾರ್ಪಣೆ: ಡಾ. ಪ್ರಭಾಕರ್ ಭಟ್ ಉದ್ಫಾಟನೆ

28/02/2023, 19:35

ಬಂಟ್ವಾಳ(reporterkarnataka.com):
ಕೇಸರಿಯ ಗುರುತೆ ತ್ಯಾಗ ಮತ್ತು ಸೇವೆ. ಆದುದರಿಂದ ತಮ್ಮ ಸಂಘಟನೆಯ ಹೆಸರಿಗೆ ತಕ್ಕಂತೆ ಹಿಂದೂ ಸಮಾಜದ ಉದ್ಧಾರಕ್ಕಾಗಿ ತ್ಯಾಗ ಹಾಗೂ ಸಮಾಜ ಸೇವೆಯಲ್ಲಿ ನಿರತರಾಗಿ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

ಅವರು ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು (ರಿ) ಇದರ ವತಿಯಿಂದ ಎರ್ಮೆಮಜಲು ಜಂಕ್ಷನ್ ನಲ್ಲಿ ನಿರ್ಮಾಣವಾದ “ಯುವ ಕೇಸರಿ ಭವನ” ವನ್ನು ದ್ವೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿ ಮಾತನಾಡಿದರು.


ಹಿಂದೂ ಸಮಾಜ ಜಾತಿಭೇದ ಬಿಟ್ಟು ಒಂದಾಗಬೇಕು. ಯುವ ಕೇಸರಿ ಫ್ರೆಂಡ್ಸ್ ಸಂಘಟನೆಯು ಕನಿಷ್ಠ ಪಕ್ಷ ತಮ್ಮ ಗ್ರಾಮ ವ್ಯಾಪ್ತಿ ಯಲ್ಲಿ ಆದರೂ ಹಿಂದೂ ಸಮಾಜದ ಯಾವುದೇ ಒಂದು ಮನೆ ಮುಳಿಹುಲ್ಲಿನ ಮನೆ, ವಿದ್ಯುತ್ ಶಕ್ತಿ ಇಲ್ಲದ ಮನೆ, ಕನಿಷ್ಠ ಪಕ್ಷ ಮನೆಯಲ್ಲಿರುವ ವಿದ್ಯಾರ್ಥಿಗಳು ಪಿಯುಸಿ ತನಕ ವಿದ್ಯಾಭ್ಯಾಸ, ಯಾವುದೇ ರೋಗ ಬಾದೆಯಿಂದ ಔಷಧಿ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇರದಂತೆ ಇರುವಂತೆ ನೋಡಿಕೊಳ್ಳಬೇಕು, ಸಮಾಜದ ಒಳಿತಿದಗಾಗಿ ರಕ್ತದಾನ,ಕಣ್ಣು ದಾನ, ಅಂಗಾಂಗ ದಾನಗಳ ಬಗ್ಗೆ ಪ್ರಚೋದಿಸಿ ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸಬೇಕು, ಆಧುನಿಕ ಆಡಂಬರಗಳನ್ನು ಬಿಟ್ಟು ಭಜನೆ ಸತ್ಕಾರ್ಯಗಳಂತ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು, ಕಾರ್ಯಕ್ರಮದ ಸಂಘಟಕರು ಕಟ್ಟಡ ಲೋಕಾರ್ಪಣೆಯ ನಿಮಿತ್ತ ಯಾವುದೇ ಆಡಂಬರ ಕಾರ್ಯಕ್ರಮ ಮಾಡದೆ ಧಾರ್ಮಿಕ ಪೂಜಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮ, ಅನ್ನದಾನ ದ ಮೂಲಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು,

ಇತ್ತೀಚಿನ ಸುದ್ದಿ

ಜಾಹೀರಾತು