3:36 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕಂಕನಾಡಿ ಗರೋಡಿ 150ರ ಸಂಭ್ರಮ: ಮಂಗಳಾದೇವಿಯಿಂದ ಹಸಿರು ಹೊರೆಕಾಣಿಕೆ

03/03/2023, 23:09

ಮಂಗಳೂರು(reporterkarnataka.com):ನಗರದ ಕಂಕನಾಡಿ ಗರೋಡಿ ಕ್ಷೇತ್ರದ 150ರ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಹಸಿರು ಹೊರೆಕಾಣಿಕೆಯನ್ನು ಮಂಗಳಾದೇವಿ ಬಿಲ್ಲವ ಸಂಘದ ವತಿಯಿಂದ ಮಂಗಳಾದೇವಿ ದೇವಸ್ಥಾನದ ವಠಾರದಿಂದ ದೇವಸ್ಥಾನದ ಆಡಳಿತ ಮೊಕ್ತೆಸರಾದ ರಮಾನಾಥ ಹೆಗ್ಡೆ ಮತ್ತು ಅತ್ತಾವರ ಅರಸು ಮುಂಡಿತ್ತಾಯ ದೇವಸ್ಥಾನದ ಆಡಳಿತ ಮೊಕ್ತೇಸರಾದ ವಿದ್ಯಾಧರ ಮತ್ತು ಬಿಲ್ಲವ ಸಂಘದ ಸದಸ್ಯರು ಸೇರಿಕೊಂಡು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಹೊರೆಕಾಣಿಕೆಗೆ ಬೊಳಾರ ಮಂಗಳಾ ಕ್ಯಾಟರಿಂಗ್ ಮಾಲಕರಾದ ಸತೀಶ್ ಮತ್ತು ರೊಹಿದಾಸ್ ಹಾಗೂ ಬೊಳಾರ ಮಾರಿಗುಡಿ ಕರಸೇವಕರ ಭಕ್ತ ವ್ರಂದ ಹಾಗೂ ಆಸು ಪಾಸಿನ ಸಂಘ ಸಂಸ್ತೆಗಳು ಹೊರೆಕಾಣಿಕೆ ಯನ್ನು ನೀಡಿ ಸಹಕರಿಸಿದ್ದಾರೆ.

ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಿ. ರಮಾನಂದ ಪೂಜಾರಿ ವಂದಿಸಿದರು.
ಹಸಿರು ಹೊರ ಕಾಣಿಕೆಯ ಮೆರವಣಿಗೆಗೆ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಚಾಲನೆ ನೀಡಿದರು. ಹಿರಿಯ ಸದಸ್ಯರಾದ ಕೆ.ಜಿ. ವಿಮಲಾ ಮೋನಪ್ಪ ಅಂಚನ್ ಹಾಗೂ ಸಲಹೆಗಾರರಾದ ವೇಣುಗೋಪಾಲ್, ಸಂಚಾಲಕ ದಿನೇಶ್ ಕುಮಾರ್ ತರುಣ್ ಮಹಿಳಾ ಘಟಕದ ಎಲ್ಲಾ ಸದಸ್ಯರು ಹಾಗೂ ಸಂಘದ ಎಲ್ಲಾ ಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು