4:38 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಬಂಗ್ರ ಕೂಳೂರು: ಚರಂಡಿ, ಫುಟ್ ಪಾತ್ ನಿರ್ಮಾಣಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

18/03/2023, 17:16

ಮಂಗಳೂರು(reporterkarnataka.com): ಸುಮಾರು1.99 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು 16ನೇ ವಾರ್ಡ್ ಹಾಗೂ ದೇರೆಬೈಲ್ ಉತ್ತರ ಕೋಡಿಕಲ್ ಮುಖ್ಯ ರಸ್ತೆಯಲ್ಲಿ ಚರಂಡಿ, ಫುಟ್‍ಪಾತ್ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 2 ವರ್ಷದಲ್ಲಿ ಕೇಂದ್ರ, ರಾಜ್ಯ ಸರಕಾರದ ಸಹಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೆರವಿನೊಂದಿಗೆ ಸುಮಾರು 2 ಸಾವಿರ ಕೋಟಿ ರೂ ಅನುದಾನವನ್ನು ಕ್ಷೇತ್ರದ ಮೂಲಸೌಕರ್ಯ ಆದ್ಯತೆ ನೀಡಿ ವಿನಿಯೋಗಿಸಲಾಗಿದೆ. ಬಹುತೇಕ ರಸ್ತೆಗಳು ಶಾಶ್ವತ ರೂಪ ಪಡೆದುಕೊಂಡಿದೆ. ನಗರ, ಹಳ್ಳಿಯ ಸಂಪರ್ಕವಾಗಿದೆ. ಗದ್ದೆ ಪುಣಿಗಳಲ್ಲಿ ಓಡಾಡುತ್ತಿದ್ದ ಕಡೆಗಳಲ್ಲಿ ಬೈಕು, ಕಾರು ಓಡಾಡುವ ರಸ್ತೆ ನಿರ್ಮಾಣವಾಗಿದೆ. ಜನರ ಸಹಕಾರದಲ್ಲಿ ಇದು ಸಾಧ್ಯವಾಗಿದೆ ಎಂದರು.

ಮನಪಾ ಸದಸ್ಯರುಗಳಾದ ಕಿರಣ್ ಕುಮಾರ್ ಕೋಡಿಕಲ್, ಮನೋಜ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ರಾಮದಾಸ್ ನಾಯಕ್, ಉದ್ಯಮಿ ದರ್ಶನ್ ಜೈನ್, ವಿದ್ಯಾಸಾಗರ್, ಲೋಕನಾಥ್ ಬಂಗೇರ, ಶರತ್ ಪಾಲ್ದಾಡಿ, ದಯಮಣಿ ಕೋಟ್ಯಾನ್, ಜಯಲಕ್ಷ್ಮಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು