11:07 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ

13/07/2021, 08:43

ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ.

ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ.
ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, ನಂತರದ ದಿನಗಳಲ್ಲಿ ಈ ಗ್ರಹಗಳು ದೂರವಾಗುವುದನ್ನು ಸಹ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು