12:57 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! 

13/07/2021, 22:07

ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ!


ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಸ್ತೆಗೆ ಒಳಚರಂಡಿ ನಿರ್ಮಿಸುವ ಕಾರ್ಯ ತಿಂಗಳುಗಟ್ಟಲೆಯಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ಮಾರ್ಟ್ ಸಿಟಿಯಡಿ ಅಗೆದು ಹಾಕಿದ ಹೊಂಡಗಳಲ್ಲಿ ಕೆಸರು ನೀರು ತುಂಬಿದೆ. ಕಳೆದ ಕೆಲವು ದಿನಗಳಿಂದ ಚರಂಡಿ ತುಂಬಿದ ನೀರನ್ನು ಜೆಸಿಬಿ ಮೂಲಕ ಖಾಲಿ ಮಾಡುವ ಕೆಲಸ ನಡೆಯುತ್ತಿದೆ. ಆದರೆ ಜೆಸಿಬಿ ಮೂಲಕ ಎತ್ತಿ ಅಲ್ಲೇ ಬದಿಗೆ ಸುರಿಯುವ ನೀರು ಮತ್ತೆ ಅದೇ ಚರಂಡಿ ಸೇರುತ್ತಿದೆ. ಆಧುನಿಕ ತಂತ್ರಜ್ಞಾನ ಬಳಕೆಗೆ ಈ ಬಾರಿ ಮಂಗಳೂರು ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಗ್ಯಾರಂಟಿ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು