1:53 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಪೊಲೀಸ್ ಧ್ವಜ ಮೆರವಣಿಗೆ: ಕಡಲನಗರಿಯ ಸರ್ವಿಸ್ ಬಸ್ ನಿಲ್ದಾಣದೊಳಗೆ ಖಾಸಗಿ ವಾಹನಗಳ ಸುನಾಮಿ!; ಟ್ರಾಫಿಕ್ ಜಾಮ್

25/04/2023, 22:07

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜನರು ನಿರ್ಭೀತಿಯಿಂದ ಮತ ಚಲಾಯಿಸುವಂತೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಧೈರ್ಯ ತುಂಬಲು ನಡೆಸಲಾದ ಪೊಲೀಸ್ ಪಥಸಂಚಲನದಿಂದ ನಗರದ ಆಯಕಟ್ಟಿನ ಪ್ರದೇಶದಲ್ಲಿ ಮಂಗಳವಾರ ಸಂಜೆ ಟ್ರಾಫಿಕ್ ಜಾಮ್ ಉಂಟಾಯಿತು. ಖಾಸಗಿ ಸರ್ವಿಸ್ ಬಸ್ ನಿಲ್ದಾಣ ಅಕ್ಷರಶಃ ಕಿಷ್ಕಿಂಧೆಯಾಗಿ ಪರಿವರ್ತನೆಗೊಂಡಿತು.

ಪೊಲೀಸ್ ಪಥಸಂಚಲನ ಸಾಗುವ ಹಿನ್ನೆಲೆಯಲ್ಲಿ ಹ್ಯಾಮಿಲ್ಟನ್ ಸರ್ಕಲ್ ಆಗಿ ಸ್ಟೇಟ್ ಬ್ಯಾಂಕ್ ಕಡೆಗೆ ಸಾಗಲು ಯಾವುದೇ ವಾಹನಗಳಿಗೆ ಪೊಲೀಸರು ಅವಕಾಶ ನೀಡಲಿಲ್ಲ. ಪೊಲೀಸ್ ಕಮಿಷನರ್ ಕಚೇರಿಯ ಎದುರುಗಡೆ ಇರುವ ರಸ್ತೆಯ ಮೂಲಕ ಖಾಸಗಿ ಸಿಟಿ ಬಸ್, ಸರ್ವಿಸ್ ಬಸ್ ಹಾಗೂ ಸರಕಾರಿ ಬಸ್ ಗಳ ಜತೆಗೆ ಎಲ್ಲ ಖಾಸಗಿ ವಾಹನಗಳಿಗೆ, ಆಟೋರಿಕ್ಷಾಗಳಿಗೆ ಸಾಗಲು ಅವಕಾಶ ನೀಡಲಾಯಿತು. ಇದರಿಂದ ಸಂಜೆ ಸುಮಾರು 6.45ರ ವೇಳೆಗೆ ವಾಹನಗಳ ಸುನಾಮಿಯೇ ಒಮ್ಮಿಂದೊಮ್ಮೆಲೇ ಸರ್ವಿಸ್ ಬಸ್ ನಿಲ್ದಾಣದೊಳಗೆ ನುಗ್ಗಿತು. ಇದರಿಂದ ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಸ್ವಲ್ಪ ಹೊತ್ತು ಗಲಿಬಿಲಿಗೊಂಡರು. ಹಾಗೆ ಒಂದು ಕ್ಷಣದಲ್ಲಿ ಬಸ್ ಸ್ಟಾಂಡ್ ಕಿಷ್ಕಿಂಧೆಯಾಗಿ ಪರಿವರ್ತನೆಗೊಂಡಿತು. ಇದರ ಪರಿಣಾಮ ಲೇಡಿಗೋಶನ್ , ಹಂಪನಕಟ್ಟೆ ಸುತ್ತಮುತ್ತಲಿನ ಪ್ರದೇಶ ಮಾತ್ರವಲ್ಲದೆ ನವಭಾರತ ಸರ್ಕಲ್ ವರೆಗೆ ಟ್ರಾಫಿಕ್ ಜಾಮ್ ಉಂಟಾಯಿತು. ಇನ್ನೊಂದು ಕಡೆಯಲ್ಲಿ ಜ್ಯೋತಿ ವರೆಗೆ, ಮತ್ತೊಂದು ಕಡೆಯಲ್ಲಿ ಪಳ್ನೀರ್ ವರೆಗೆ ಸುಗಮ ಸಂಚಾರಕ್ಕೆ ಅಡ್ಡಿಯಾಯಿತು. ಆದರೆ ಒಂದು ತಾಸಿನೊಳಗೆ ಎಲ್ಲವೂ ಕ್ಲಿಯರ್ ಆಗಿ ಸುಗಮ ಸಂಚಾರ ತೆರೆದುಕೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು