5:27 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ, ಬಂಟ್ವಾಳ ಮೂಲದ ರಾಧೇಶ್ ಮಯ್ಯಗೆ ಫ್ರೆಶರ್ ಅವಾರ್ಡ್

01/05/2023, 00:40

ಬೆಂಗಳೂರು(reporterkarnataka.com): ಬೆಂಗಳೂರಿನ ಗ್ರೇಟ್ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ರಾಧೇಶ್ ಮಯ್ಯ ಅವರು ಕಾಲೇಜಿನ ಫ್ರೆಶರ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಕಾಲೇಜಿನಲ್ಲಿ ಕಳೆದ ವಾರ ನಡೆದ 2023ನೇ ಸಾಲಿನ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ರಾಧೇಶ್ ಮಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಬೆಂಗಳೂರಿನ 12 ಕಾಲೇಜುಗಳಿಂದ ರೇವಾ ವಿಶ್ವವಿದ್ಯಾಲಯದ ಕಾಲೇಜು ಭಾಗವಹಿಸುವವರಲ್ಲಿ 2ನೇ ಸ್ಥಾನವನ್ನು ಗೆದ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ
ರಾಧೇಶ್ ಮಯ್ಯ ಅವರು ಮಾರ್ಕೆಟಿಂಗ್ ಪ್ರಮೋಶನ್ ಮಾಡುವ ಚಾಲೆಂಜ್ ನಲ್ಲಿ ಕೂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದರಲ್ಲಿ 12 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದು ಎಂಬಿಎ ವಿದ್ಯಾರ್ಥಿ ಗಳಿಗೆ ಮೀಸಲಾದ ಚಾಲೆಂಜ್ ಆಗಿದೆ. ಇನ್ನು ಫ್ರೆಶರ್ ಅವಾರ್ಡ್ ಕಾಲೇಜಿನಲ್ಲಿ ಹಾಡುಗಾರಿಕೆ, ಕಲಿಕೆ ಇನ್ನಿತರ ಎಲ್ಲಾ ಚಟುವಟಿಕೆಗಳಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಗೆ ಮೀಸಲಾದ ಅವಾರ್ಡ್ ಆಗಿದೆ. ಅದು ಈ ಬಾರಿ ರಾಧೇಶ್ ಮಯ್ಯ ಅವರ ಪಾಲಾಗಿದೆ.
ರಾಧೇಶ್ ಮಯ್ಯ ಅವರು ನಿವೃತ್ತ ಕಂದಾಯ ಅಧಿಕಾರಿ ಹಾಗೂ ಸಂಗೀತ ವಿದ್ವಾಂಸ ಡಾ. ಎನ್. ಸೋಮಶೇಖರ್ ಮಯ್ಯ ಬಂಟ್ವಾಳ ಹಾಗೂ ಶಿಕ್ಷಕಿ ಶ್ರೀವಾಣಿ ಮಯ್ಯ ಅವರ ಪುತ್ರ. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಳೇ ವಿದ್ಯಾರ್ಥಿ. ಈಗ ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು