3:17 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ: ಶಶಿಕಾಂತ ಪಡಸಲಗಿ ಖಡಕ್ ಎಚ್ಚರಿಕೆ

16/07/2021, 18:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ರೈತರಿಗೆ ಕಿರುಕುಳ ನೀಡುತ್ತಿರುವುದು ಕಂಡು ಬಂದರೆ ಅಂತಹುಗಳಿಗೆ ಬೀಗ ಜಡಿಯಲಾಗುವುದು.ರೈತರಿಗೆ ಸಕ್ಕರೆ ಕಾರ್ಖಾನೆಗಳು ಇನ್ನೂವರೆಗೂ ಬಿಲ್ ನೀಡಿಲ್ಲ.ಅಂತಹ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ ರೈತರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ಸರಿಯಾಗಿ ರಸ ಗೊಬ್ಬರಗಳು, ಬಿತ್ತನೆಯ ಬೀಜಗಳು ದೊರೆಯುತ್ತಿಲ್ಲ. ರಸ ಗೊಬ್ಬರಗಳನ್ನು ಎಂಆರಪಿ ದರಕ್ಕಿಂತ ಹೆಚ್ಚಿಗೆ ನೀಡುವುದು ಕಂಡು ಬಂದಿದೆ. ಸಂಬರಗಿ ಗ್ರಾಮದಲ್ಲಿ ಪ್ರಿಯ ವೈನ್ಸ್ ತೆರವು ಮಾಡಲು ರೈತ ಮುಖಂಡರು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಗ್ರಾಮಸ್ಥರು ಸೇರಿ ಸುಮಾರು 1 ತಿಂಗಳಿಂದ ಶ್ರಮ ಪಟ್ಟು ಬೇಕಾದ ದಾಖಲಾತಿಗಳನ್ನು ಸಂಬಂಧ ಪಟ್ಟ ಅಧಿಖಾರಿಗಳಿಗೆ ಕೊಟ್ಟಿದ್ದು ಕೂಡಲೇ ವೈನ್ಸ್ ಶಾಪ್ ನ್ನ್ ತೆರವು ಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿರುವ ಎಲ್ಲ ರೈತರು ಸೇರಿ ಹೋರಾಟಕ್ಕೆ ಇಳಿವುದಾಗಿ ಎಚ್ಚರಿಕೆ ಕೊಟ್ಟರು.

ರೈತರು ಯಾವುದೇ ಜಾತಿ, ಭಾಷೆ, ಧರ್ಮ, ಶ್ರೀಮಂತ-ಬಡವ ಎಂಬ ಬೇಧ ಮಾಡದೇ ಒಗ್ಗಟ್ಟಾಗಿರಲು ಅವರು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು