9:15 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಮತ್ತೆ ಖದರ್!: ಎಸ್ ಡಿಪಿಐ ಜತೆಗಿನ ತಾಂಟುವ ಆಟದಲ್ಲಿ ಅಂತರ ಹೆಚ್ಚಿಸಿ ಗೆದ್ದ ಖಾದರ್!

13/05/2023, 22:37

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಎಲ್ಲರ ಲೆಕ್ಕಾಚಾರದಂತೆ ಮಂಗಳೂರು ಕ್ಷೇತ್ರದಿಂದ
ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಗೆಲುವು ಸಾಧಿಸಿದ್ದಾರೆ. ಜತೆಗೆ ಗೆಲುವಿನ‌ ಅಂತರವನ್ನೂ ಹೆಚ್ಚಿಸಿಕೊಂಡಿದ್ದಾರೆ.
ಸತತ 5ನೇ ಬಾರಿ ವಿಧಾನಸಭೆ ಪ್ರವೇಶಿಸುತ್ತಿರುವ ಖಾದರ್ ಅವರಿಗೆ ಈ ಬಾರಿ ಟಫ್ ಫೈಟ್ ಎದುರಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಲೆಕ್ಕಾಚಾರ ಹಾಕಿದ್ದರು. ಕಾರಣ ಎಸ್ ಡಿಪಿಐ ಅಭ್ಯರ್ಥಿ ರಿಯಾಜ್ ಪರಂಗಿಪೇಟೆ ಅವರು ತೊಡೆ ತಟ್ಟಿ ಖಾದರ್ ವಿರುದ್ಧ ಸ್ಪರ್ಧೆಗಿಳಿದಿದ್ದರು. ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಗಿಂತ ಹೆಚ್ಚು ಖಾದರ್ ವಿರುದ್ಧ ಆರೋಪವನ್ನು ರಿಯಾಜ್ ಮಾಡಿದ್ದರು. ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಭ್ಯರ್ಥಿ ಗಳಾಗಿರುವುದರಿಂದ ಒಂದೇ ಸಮುದಾಯದೊಳಗಿನ ಜಗಳ ಮಾರನೇ ವ್ಯಕ್ತಿಗೆ ಸಹಾಯ ಮಾಡಿತು ಎಂದು ಜನರು ಅಂದುಕೊಂಡಿದ್ದರು. ಖಾದರ್- ರಿಯಾಜ್ ಫೈಟ್ ನಿಂದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಗೆ ನೆರವಾದೀತು ಎಂಬ ಲೆಕ್ಕಾಚಾರ ಕೇಳಿ ಬಂದಿತ್ತು. ಆದರೆ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಲೆಕ್ಕಾಚಾರವೆಲ್ಲ ತಲೆ ಕೆಳಗಾಗಿದೆ. ಎಸ್ ಡಿಪಿಐ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಮತ ಬಾಚಿಕೊಂಡರೂ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಂದ 23 ಸಾವಿರ ಮತಗಳ ಅಂತರದಲ್ಲಿ ಖಾದರ್ ಗೆಲುವಿನ ನಗೆ ಹೊರಸೂಸಿದ್ದಾರೆ.




ಖಾದರ್ ಗೆಲುವಿನ ಓಟವನ್ನು ತಡೆಯಲು ಬಿಜೆಪಿ ಪಾಳಯದಲ್ಲಿ ಭಾರೀ ಕಾರ್ಯತಂತ್ರ ನಡೆಯಲಿದೆ ಎಂಬ ಮಾಹಿತಿ ಆರಂಭದಲ್ಲಿದ್ದರೂ ನಂತರ ಅದು ಠುಸ್ ಎನಿಸಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರನ್ನು ಬಹುತೇಕ ಕ್ಷೇತ್ರಗಳಿಗೆ ಕರೆಸಿ ರೋಡ್ ಶೋ ನಡೆಸಿದ್ದರೂ ಸತೀಶ್ ಕುಂಪಲ ಪರ ಯಾವುದೇ ಸ್ಟಾರ್ ಕ್ಯಾಂಪೇನರ್ ಗಳನ್ನು ಕರೆಸದೆ ಬಿಜೆಪಿ ಕೈಚೆಲ್ಲಿ ಕುಳಿತ್ತಿತ್ತು. ಒಂದು ರೀತಿಯಲ್ಲಿ ಬಿಜೆಪಿ ಇಲ್ಲಿ ಸತೀಶ್ ಕುಂಪಲ ಅವರನ್ನು ಬಲಿಪಶು ಮಾಡಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು