3:18 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Mangalore : ಕಷ್ಟದಲ್ಲಿದ್ದ 350ಕ್ಕೂ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಿದ ಕೋಸ್ಟಲ್‌ವುಡ್ ನಟ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡ

14/05/2021, 21:28

ಮಂಗಳೂರು (Reporter Karnataka News)

ಕೋಸ್ಟಲ್ ವುಡ್ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡದಿಂದ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ತೀವ್ರ ಕಷ್ಟದಲ್ಲಿದ್ದ ಕುಟುಂಬಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಕಾವೂರು, ಕೋಡಿಕಲ್, ಬೋಳೂರು, ಉರ್ವ, ಬಜಾಲ್, ಜಲ್ಲಿಗುಡ್ಡೆ, ಫೈಸಲ್‌ನಗರ, ಸುರತ್ಕಲ್, ಕೊಡಿಯಾಲ್ ಬೈಲ್, ಕುದ್ರೋಳಿ, ಮಂಗಳಾದೇವಿ, ಪಾಂಡೇಶ್ವರ, ಉರ್ವ ಸ್ಟೋರ್ ಸೇರಿದಂತೆ ಮಂಗಳೂರು ನಗರದಾದ್ಯಂತ ಅತಿ ಕಷ್ಟದಲ್ಲಿರುವ ಕುಟುಂಬಗಳಿಗೆ ರೇಶನ್ ಕಿಟ್‌ಗಳನ್ನು ಹಂಚಲಾಯಿತು.

ಸಾವಿರಕ್ಕೂ ಅಧಿಕ ಕರೆಗಳು ತಂಡಕ್ಕೆ ಬಂದಿದ್ದು, ಬಹುತೇಕ ಕುಟುಂಬಗಳಿಗೆ ಕಿಟ್ ವಿತರಿಸುವ ಪ್ರಯತ್ನವನ್ನು ತಂಡ ಮಾಡುತ್ತಿದೆ. ಸದ್ಯಕ್ಕೆ 350 ಕುಟುಂಬಗಳಿಗೆ ಕಿಟ್ ವಿತರಿಸಲಾಗಿದೆ. ಅರ್ಹರ ಮನೆಗಳಿಗೆ ಭೇಟಿ ಅವರಿಗೆ ಕಿಟ್‌ಗಳನ್ನು ನೀಡಲಾಗುತ್ತಿದೆ.

ರೂಪೇಶ್ ಶೆಟ್ಟಿ ಅವರ ಜತೆಗೆ ಅನಿಲ್ ಶೆಟ್ಟಿ, ದೀಕ್ಷಿತ್ ಆಳ್ವ, ಮಂಜುನಾಥ್ ಅತ್ತಾವರ್, ಲವಿತ್ ಕೊಟ್ಟಾರಿ, ನಿತೇಶ್ ಕುಲಾಲ್, ವಜ್ರೇಶ್ ಸನಿಲ್, ರಾಜ ಮಾಣಿ, ನಿಖಿಲ್ ಬೇಕಲ್ ಮೊದಲಾದವರೂ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು