11:47 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಕಚೇರಿಯಲ್ಲಿ ಬ್ರೋಕರ್ ಗಳ ಕಾಟ:  ಜಾತಿ ಸರ್ಟಿಫಿಕೇಟಿಗೂ ನಿಲ್ಲಬೇಕಿಲ್ಲ 3 ದಿನ ಕ್ಯೂನಲ್ಲಿ !!

18/07/2021, 10:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಪಟ್ಟಣದ ಸೌಹಾರ್ದ ಸೌಧದಲ್ಲಿರುವ ತಹಶೀಲ್ದಾರ್ (ತಃಸಿಲ್) ಕಾರ್ಯಾಲಯದಲ್ಲಿ ಮಧ್ಯವರ್ತಿಗಳ ಕಾಟ ವಿಪರೀತವಾಗಿದೆ. ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಸಕಾಲದಲ್ಲಿ ನಡೆಯದ ಕಾರಣ ಜನರು ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ. ಬ್ರೋಕರ್ ಗಳು ಜನರಿಂದ ವಿಪರೀತ ಹಣ ದೋಚುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತಿದೆ.

ಬ್ರೋಕರ್ ಗಳು ಪ್ರತಿಯೊಂದು ಕೆಲಸಕ್ಕೂ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ. ಜನರಿಗೆ ತಮ್ಮ ದಿನದ ದುಡಿಮೆ ಬಿಟ್ಟು ದಿನಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಅರ್ಜಿಗಳು ಹಾಕುವುದು ಕಷ್ಟವಾದಾಗ ಮಧ್ಯವರ್ತಿಗಳ ಮೊರೆ ಹೋಗುತ್ತಾರೆ. ಆಗ ಬ್ರೋಕರ್ ಗಳು ದುಪ್ಪಟ್ಟು ಹಣ ವಸೂಲಿ ಮಾಡಿ ರಾತ್ರಿ ಹೊತ್ತಿನಲ್ಲಿ ಕೆಲಸ ಮಾಡಿಕೊಳ್ಳುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತದೆ.

ಜಾತಿ ಆದಾಯ ಸರ್ಟಿಫಿಕೇಟ್ ಗಾಗಿ ಮೂರು ದಿನಗಳ ಕಾಲ ಕೆಲಸ ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾಗುತ್ತದೆ. ಯಾಕೆಂದರೆ ಸರ್ವರ್  ಸರಿ ಇಲ್ಲ ಎಂಬ ಉತ್ತರ ಕಂಪ್ಯೂಟರ್ ಆಪರೇಟರ್ ಗಳಿಂದ ಬರುತ್ತದೆ. ಇಲ್ಲಿನ ಹೊಸ ತಹಶೀಲ್ದಾರ್ ವಿಜಯಲಕ್ಷ್ಮೀ ಅವರಿಗೆ ಇಲ್ಲಿನ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲ.

ಒಟ್ಟಿನಲ್ಲಿ ಸಾರ್ವಜನಿಕರ ಪರಿಸ್ಥಿತಿ  ಹೇಳತೀರದು.ಇಷ್ಟೇ ಅಲ್ಲದೆ ತಹಶೀಲ್ದಾರ್ ಕಚೇರಿಯ ಕೆಲಸಕ್ಕಾಗಿ ಸಾರ್ವಜನಿಕರು ಕೋವಿಡ್ ಮರೆತು ಒಬ್ಬರಿನ್ನೊಬ್ಬರು ಅಂಟಿಕೊಂಡು ನಿಲ್ಲುತ್ತಾರೆ. ಮಹಿಳೆಯರಿಗೆ ಮತ್ತು ಪುರುಷರಿಗೆ ಬೇರೆ ಬೇರೆ ಸಾಲುಗಳನ್ನು ಮಾಡಿ  ಅವಕಾಶ ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು