11:33 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಯುಪಿಎಸ್‍ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ

23/05/2023, 22:32

ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‍ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾಡಮಿ ಯಶಸ್ವಿಯಾಗಿದೆ.

ಈ ಅಕಾಡಮಿಯಿಂದ ಟ್ರೈನಿಂಗ್ ಮತ್ತು ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ ಬಗ್ಗೆ ಸಲಹೆ ಪಡೆದ ಸೌರಭ್ ಎ ನರೇಂದ್ರ 198ನೇ ರ‍್ಯಾಂಕ್; ಪಿ ಶ್ರವಣ್ ಕುಮಾರ್ 222ನೇ ರ‍್ಯಾಂಕ್ ; ವಿಜಯಪುರ ಜಿಲ್ಲೆಯ ಸರೂರ ತಾಂಡದ ಶೃತಿ ಯರಗಟ್ಟಿ 362ನೇ ರ‍್ಯಾಂಕ್ ; ಮೈಸೂರಿನ ಪೂಜಾ ಮುಕುಂದ್ 390ನೇ ರ‍್ಯಾಂಕ್ ಮತ್ತು ಅಪೂರ್ವ ಮಂದಾ 646ನೇ ರ‍್ಯಾಂಕ್ ಪಡೆದು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಗೆ ಧೀ ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಟ್ರೈನಿಂಗ್ ಪಡೆದಿದ್ದರು ವಿಶೇಷ ಸಂಗತಿ ಎಂದರೆ ಸಂಸ್ಥೆಯ ಮೊದಲ ಬ್ಯಾಚ್‍ನಲ್ಲಿ ರಾಜ್ಯದ 30ಕ್ಕೂ ಹೆಚ್ಚು ಬಡತನ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಿತ್ತು. ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆಗೆ ಬಗ್ಗೆ ಸಲಹೆ ಪಡೆದು ಯುಪಿಎಸ್‍ಸಿ 2022ರಲ್ಲಿ ಆಯ್ಕೆ ಆಗುವ ಮೂಲಕ ಸೌರಭ್ ಎ ನರೇಂದ್ರ, ಪಿ ಶ್ರವಣ್ ಕುಮಾರ್, ಶೃತಿ ಯರಗಟ್ಟಿ ಪೂಜಾ ಮುಕುಂದ್ ಮತ್ತು ಅಪೂರ್ವ ಮಂದಾ ರವರು ಸಂಸ್ಥೆ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಕಾವ್ಯಾ ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು