5:53 AM Saturday8 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಚ್.ಎಂ. ಪೂವಪ್ಪ ಅವರಿಗೆ ಬೀಳ್ಕೊಡುಗೆ

04/06/2023, 19:46

ಮಂಗಳೂರು(reporterkarnataka.com): ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಅವರಿಗೆ ಬೀಳ್ಕೊಡುಗೆ ನಡೆಯಿತು.
ಎಚ್.ಎಂ.ಪೂವಪ್ಪ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಅವರು ಮಾತನಾಡಿ, ಉತ್ತಮ ಸೇವಾ ಹಿನ್ನೆಲೆಯೊಂದಿಗೆ ಎಚ್.ಎಂ. ಪೂವಪ್ಪ ಅವರು ಸೇವೆಯಿಂದ ನಿವೃತ್ತರಾಗುತ್ತಿರುವುದು ಸಂತೋಷದ ವಿಷಯ. ನಿವೃತ್ತ ಜೀವನದಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇವಾ ಅವಧಿಯ ಒಳ್ಳೆಯ ಅನುಭವಗಳನ್ನು ಮೆಲುಕು ಹಾಕುತ್ತಾ ಸಂತೃಪ್ತ ಜೀವನ ನಡೆಸುವಂತೆ ಶುಭ ಹಾರೈಸಿದರು.


ಪೂವಪ್ಪ ಅವರು ನಡೆಸಿರುವ 38 ವರ್ಷ ಎರಡು ತಿಂಗಳ ಸೇವಾವಧಿ ಸುದೀರ್ಘವಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸೇವಾಅವಧಿಯ ಸುಮಾರು ಶೇ.70 ಬಾಗವನ್ನು ಇಲಾಖೆ ಸಿಬ್ಬಂದಿ ಜೊತೆಯಲ್ಲೇ ಸಮವಸ್ತ್ರದೊಂದಿಗೆ ಕಳೆದಿರುತ್ತಾರೆ. ಕುಟುಂಬದ ಜೊತೆಗೆ ಕಳೆದಿರುವುದು ಕಡಿಮೆ. ಈ ವೃತ್ತಿಯಲ್ಲಿ ಇಲಾಕೆ ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರ ತ್ಯಾಗ ಅನನ್ಯವಗಿದೆ ಎಂದು ಅವರು ಹೇಳಿದರು.
ಇಲಾಖೆಯ ಗೌರವ ಸ್ವೀಕರಿಸಿ ಮಾತನಾಡಿದ ಎಚ್.ಎಂ.ಪೂವಪ್ಪ ಅವರು, ಬಜಪೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ 38 ವರ್ಷಗಳ ಹಿಂದೆ ವೃತ್ತಿ ಜೀವನ ಆರಂಭಿಸಿದ ತಾನು ಅದೇ ಬಜಪೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿವೃತ್ತಿಯಾಗುತ್ತಿದ್ದೇನೆ. ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಸಂತೃಪ್ತಿಯಿದೆ. ಇಲಾಖೆ ಹಿರಿಯ ಅಧಿಕಾರಿಗಳು, ಸಹದ್ಯೋಗಿ ಮಿತ್ರರು ತೋರಿದ ಪ್ರೀತಿ, ವಿಶ್ವಾಸ, ಸಹಕಾರಕ್ಕೆ ಅಭಾರಿಯಾಗಿದ್ದೇನೆ ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿವೃತ್ತರ ಜೊತೆಗಿನ ಅನುಭವ ಹಂಚಿಕೊಂಡರು.
ಬಜಪೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಆರ್.ನಾಯಕ್ ಕೆ.ಆರ್.ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ನಿವೃತ್ತ ಎಚ್.ಎಂ.ಪೂವಪ್ಪ ಅವರ ಪತ್ನಿ ಶಕುಂತಳಾ ಪೂವಪ್ಪ ಅವರು ಉಪಸ್ಥಿತರಿದ್ದರು.
ನಿವೃತ್ತ ಸಬ್ ಇನ್ಸ್‌ಪೆಕ್ಟರ್ ರಾಜಾರಾಂ ಕಾರ್ಯಕ್ರಮ ನಿರ್ವಹಿಸಿದರು. ಕೆಂಚಪ್ಪ ವಂದಿಸಿದರು.
…..

ಇತ್ತೀಚಿನ ಸುದ್ದಿ

ಜಾಹೀರಾತು