1:28 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಬೊಂದೆಲ್ ಲಾಫ್ಟರ್ ಕ್ಲಬ್‌: ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು 2 ದಿನಗಳ ನಗೆ ಸೆಶನ್‌

05/06/2023, 21:39

ಮಂಗಳೂರು(reporterkarnataka.com):ನಗರದ ಬೊಂದೆಲ್ ಜಂಕ್ಷನ್‌ನಲ್ಲಿರುವ ಜಾನ್ಲಿನ್ ಕಾಟೇಜ್‌ನಲ್ಲಿ ಕಳೆದ 20 ವರುಷಗಳಿಂದ ಲಾಫ್ಟರ್ ಕ್ಲಬ್‌ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ಇವರು ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ 100 ವಿದ್ಯಾರ್ಥಿಗಳಿಗೆ ಜೂನ್ 3 ಮತ್ತು 5ರಂದು ಲಾಫ್ಟರ್ ಸೆಶನ್‌ಗಳನ್ನು ನಡೆಸಿತು.


ಬೊಂದೆಲ್ ಕ್ಲಬ್ಬಿನ ಸಂಸ್ಥಾಪಕ ಜಾನ್ ಬಿ. ಮೊಂತೇರೊ ಮತ್ತು ಕ್ಲಬ್ಬಿನ ಹಿರಿಯ ಸದಸ್ಯರಾದ ನಿವೃತ್ತ ಪ್ರಾಧ್ಯಾಪಕ ಖಾಲಿದ್ ಅನ್ಸಾರಿ ಮತ್ತು ಬೊನವೆಂಚರ್ ಡಿಸೋಜಾ ಅವರು ವಿದ್ಯಾರ್ಥಿ ಮತ್ತು ಅಧ್ಯಾಪಕರಿಗೆ ಮಾರ್ಗದರ್ಶನ ನೀಡಿದರು. ಇದಕ್ಕೂ ಮುನ್ನ ಎಪ್ರಿಲ್ 4ರಂದು ಜಾನ್ ಮೊಂತೇರೊ ಮತ್ತು ಪ್ರೊ. ಖಾಲಿದ್ ಅನ್ಸಾರಿ ಅವರನ್ನು ಬಲ್ಮಠ ಎ.ಜೆ. ಟರ‍್ಸ್ನ ಕಾಲೇಜು ಆವರಣದಲ್ಲಿ ಬೋಧಕರಿಗಾಗಿ ನಗೆ ಅಧಿವೇಶನವನ್ನು ನಡೆಸಲು ಆಹ್ವಾನಿಸಲಾಗಿತ್ತು. ಪ್ರಾಂಶುಪಾಲೆ ಡಾ. ಲರಿಸ್ಸಾ ಮಾರ್ಥಾ ಸ್ಯಾಮ್ಸ್ ಅವರ ಮಾರ್ಗದರ್ಶನದಲ್ಲಿ ಮಾನಸಿಕ ಆರೋಗ್ಯ ವಿಭಾಗದ ಉಪನ್ಯಾಸಕಿ ಶ್ರೀರಂಜನಿ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು