4:36 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು

07/06/2023, 22:00

ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹುಲಿ ನೇತ್ರಾವತಿ ನಡುವೆ ತೀವ್ರ ಕಾಳಗ ನಡೆದಿತ್ತು. ಇದರಲ್ಲಿ ಹೆಣ್ಣು ಹುಲಿ ನೇತ್ರಾವತಿಯ ಮುಖಕ್ಕೆ ತೀವ್ರವಾದ ಗಾಯಗಳಾಗಿತ್ತು. ಗಂಡು ಹುಲಿ ರೇವಾ ನೇತ್ರಾವತಿಯ ಸಂಪರ್ಕ ಬಯಸಿ ಬಂದಾಗ ನೇತ್ರಾವತಿ ಪ್ರತಿರೋಧ ಒಡ್ಡಿತ್ತು. ಆ ಸಂದರ್ಭದಲ್ಲಿ ಎರಡೂ ಹುಲಿಗಳ ನಡುವೆ ಕಾದಾಟ ನಡೆದಿತ್ತು. ಪಿಲಿಕುಳ ಜೈವಿಕ ಉದ್ಯಾವನದ ಸಿಬ್ಬಂದಿಗಳು ಕಾಳಗ ನಿರತ ಹುಲಿಗಳನ್ನು ಬೇರ್ಪಡಿಸಿ ಬೋನಿಗೆ ಹಾಕಿದ್ದರು. ಗಾಯಗೊಂಡಿದ್ದ ನೇತ್ರಾವತಿಗೆ ಜೈವಿಕ ಉದ್ಯಾವನದ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಬುಧವಾರ ಬೆಳಗ್ಗೆ ವೈದ್ಯರು ಚಿಕಿತ್ಸೆ ನೀಡುತ್ತಿರುವಾಗಲೇ ಹುಲಿ ಕುಸಿದು ಬಿದ್ದು ಪ್ರಾಣ ಬಿಟ್ಟಿದೆ. ಗಾಯಗೊಂಡಿದ್ದ ನೇತ್ರಾವತಿಗೆ ತೀವ್ರ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು