12:28 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯ ಸ್ಥಿತಿ:ತಲೆ ಮೇಲೆ ಕೈ ಹೊತ್ತು ಕಣ್ಣೀರಿಟ್ಟ ಜನಾರ್ದನ ಪೂಜಾರಿ !

21/07/2021, 18:14

ಮಂಗಳೂರು( reporterkarnataka news): 

ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್  ಅವರ ಆರೋಗ್ಯ ಸ್ಥಿತಿಯನ್ನು ನೆನೆದು ಇನ್ನೊಬ್ಬ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ತಲೆ ಮೇಲೆ ಕೈಹೊತ್ತು ಕಣ್ಣೀರಿಟ್ಟ ಘಟನೆಗೆ ಭಾನುವಾರ ಮಂಗಳೂರು ಸಾಕ್ಷಿಯಾಯಿತು.

ನಗರದ ಖಾಸಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರ ಆರೋಗ್ಯ ಸ್ಥಿತಿಯನ್ನು ಕಂಡ ಬಳಿಕ ಪೂಜಾರಿ ಅವರು ಕಣ್ಣೀರ ಕೋಡಿ ಹರಿಸಿದರು. ಮಾಧ್ಯಮದ ಜತೆ ಮಾತನಾಡಲು ಯತ್ನಿಸಿದ ಪೂಜಾರಿ ಅವರು ಭಾವುಕರಾಗಿ ಮಾತು ಹೊರ ಹೊಮ್ಮಲೇ ಇಲ್ಲ. ಎರಡು ಪದ ಆಡುವಷ್ಟರಲ್ಲಿ ಗದ್ಗದಿತರಾಗಿ ತಲೆ ಮೇಲೆ ಕೈಇಟ್ಟು ರೋಧಿಸಲಾರಂಭಿಸಿದರು.

ರಾಜಕೀಯದಲ್ಲಿ ಸಮಕಾಲೀನರಾದ ಪೂಜಾರಿ ಮತ್ತು ಆಸ್ಕರ್ ಫರ್ನಾಂಡಿಸ್ ಅವರು ಒಳ್ಳೆಯ ಮಿತ್ರರೂ ಕೂಡ ಆಗಿದ್ದರು. ಪೂಜಾರಿ ಅವರು ಸಂಸತ್ ನಲ್ಲಿ ಮಂಗಳೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೆ, ಆಸ್ಕರ್ ಅವರು ನೆರೆಯ ಉಡುಪಿ ಕ್ಷೇತ್ರದಿಂದ ಲೋಕಸಭೆಯನ್ನು ಪ್ರತಿನಿಧಿಸುತ್ತಿದ್ದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಪ್ರಬಲ ನಾಯಕರಾಗಿ ಅವರು ಹೊರ ಹೊಮ್ಮಿದ್ದರು.

ಯೋಗಾಭ್ಯಾಸ ಮಾಡುವಾಗ ಜಾರಿ ಬಿದ್ದು ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಆಸ್ಕರ್ ಫೆರ್ನಾಂಡಿಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ನಗರದ ಅತ್ತಾವರದ ಫ್ಲ್ಯಾಟ್ ನಲ್ಲಿ ಎಂದಿನಂತೆ ಯೋಗಾಭ್ಯಾಸ ನಿರತರಾಗಿದ್ದ ವೇಳೆ ಮಾಜಿ ಸಚಿವರು ಬಿದ್ದು ಗಾಯಗೊಂಡಿದ್ದರು. ಹೊರ ನೋಟಕ್ಕೆ ಯಾವುದೇ ಗಾಯಗಳಿಲ್ಲದ ಹಿನ್ನೆಲೆಯಲ್ಲಿ ಅವರು ನಿರ್ಲಕ್ಷ್ಯ ವಹಿಸಿದ್ದರು. ಆದರೆ ಅದೇ ದಿನ ಸಂಜೆ ಡಯಾಲಿಸಿಸ್ ಗೆ ಆಸ್ಪತ್ರೆಗೆ ತೆರಳಿದಾಗ ತಲೆಯ ಒಳಭಾಗದಲ್ಲಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿ ಅವರನ್ನು ನೋಡಿಕೊಳ್ಳುವ ವೈದ್ಯರು ಮಾಹಿತಿ ನೀಡಿದ್ದರು. ನಂತರ ಅವರು ತೀವ್ರ ನಿಗಾ ಘಟಕಕ್ಕೆ ಸೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು