4:27 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಜೀವ ಜಗತ್ತಿನ ಬಗ್ಗೆ ಬೆರಗು ಮೂಡಿಸುವ ಏರೋಪ್ಲೇನ್ ಚಿಟ್ಟೆ ಕೃತಿ: ತೇಜಸ್ವಿ ಓದು ಕಾರ್ಯಕ್ರಮದಲ್ಲಿ ರಂಗಕರ್ಮಿ ಡಿ.ಎಂ.ಮಂಜುನಾಥಸ್ವಾಮಿ

12/07/2023, 21:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೀವ ಜಗತ್ತಿನ ಕ್ರಿಮಿ ಕೀಟಗಳ, ಪ್ರಾಣಿ ಪಕ್ಷಿಗಳ, ನೆಲ ಜಲದ, ಮರ ಗಿಡಗಳ ಮತ್ತು ಮಾನವ ಸಂಬಂಧಗಳ ಕುರಿತ ಕಥೆಗಳು ತೇಜಸ್ವಿ ಅವರ ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಕೃತಿಯಲ್ಲಿದ್ದು ಜೀವ ಜಗತ್ತಿನ ಬಗ್ಗೆ ಬೆರಗು ಮೂಡಿಸುತ್ತದೆ ಎಂದು ರಂಗಕರ್ಮಿ ಡಿ.ಎಂ.ಮಂಜುನಾಥಸ್ವಾಮಿ ಹೇಳಿದರು.
ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ನಡೆದ ತೇಜಸ್ವಿ ಓದು ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಕೃತಿಯ ಬಗ್ಗೆ ಉಪನ್ಯಾಸ ನೀಡಿ ಅವರು ಮಾತನಾಡಿದರು. ಪರಿಸರಕ್ಕೆ ಹತ್ತಿರವಾಗಿ ಮತ್ತು ಪೂರಕವಾಗಿ ಪ್ರಾಣಿ ಪಕ್ಷಿಗಳು ಬದುಕುತ್ತವೆ, ಆ ಪ್ರಾಣಿ ಪಕ್ಷಿಗಳು ಹೇಗೆ ಅಪಾಯದ ಅಂಚಿನಲ್ಲಿವೆ, ಆ ಪ್ರಾಣಿ ಪಕ್ಷಿಗಳ ರಕ್ಷಣೆಯ ಜವಾಬ್ದಾರಿ ನಮ್ಮೆಲರ ಮೇಲಿದೆ ಎಂಬುದನ್ನು ಈ ಕೃತಿಯಲ್ಲಿ ದಾಖಲಿಸಿದ್ದಾರೆ ಎಂದರು.
ಹಳ್ಳಿಯ ಕೊನೆ ಅಂಚಿನ ಜನರ ರೂಡಿಯ ಮಾತುಗಳನ್ನು ಕೂಡ ಸಂಶ್ಲೇಷಣೆ ಮಾಡಿ ಆ ಮಾತುಗಳಲ್ಲಿನ ಸತ್ಯವನ್ನು, ವೈಜ್ಞಾನಿಕವಾಗಿರುವ ಸಂಗತಿಗಳನ್ನು ಕಂಡು ಹಿಡಿಯುವಂತಹ ಕೆಲಸವನ್ನು ಮಾಡಿದ್ದಾರೆ. ಸಮಾಜದ ಕೊನೆಯಂಚಿನ ಜನರ ಬದುಕನ್ನು ತಮ್ಮ ಕೃತಿಗಳಲ್ಲಿ ಕಥೆಯಾಗಿಸಿದ್ದಾರೆ. ತೇಜಸ್ವಿ ಅವರ ಕೃತಿಗಳನ್ನು ಓದುವುದರಿಂದ ಪರಿಸರಕ್ಕೆ ಪೂರಕವಾಗಿ ಬದುಕಬೇಕು ಎಂಬ ಅರಿವು ನಮ್ಮಲ್ಲಿ ಮೂಡುತ್ತದೆ. ತೇಜಸ್ವಿ ಅವರು ಓದಿದ್ದು ಕನ್ನಡ ಸಾಹಿತ್ಯವಾಗಿದ್ದರೂ ಕೂಡ ಯಾವ ಜೀವ ವಿಜ್ಞಾನಿಗೂ ಕಡಿಮೆ ಇಲ್ಲದ ಕೆಲಸವನ್ನು ಮಾಡಿದವರು ಪೂರ್ಣಚಂದ್ರ ತೇಜಸ್ವಿ ಅವರು. ಯಾವತ್ತೂ ಅಳಿಸಿ ಹೋಗದಂತಹ ಪರಿಸರದ ಕೌತುಕಗಳನ್ನು ತಮ್ಮ ಕೃತಿಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ತೇಜಸ್ವಿ ಅವರ ಕೃತಿಗಳನ್ನು ಮಕ್ಕಳು, ವಿದ್ಯಾರ್ಥಿಗಳು ಓದುವಂತಾಗಬೇಕಿದೆ. ಆ ಮೂಲಕ ಪರಿಸರದ ಬಗ್ಗೆ ಬೆರಗು, ಕುತೂಹಲ, ಜಾಗೃತಿ ಮೂಡಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕರಾದ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು