3:43 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

23/07/2021, 22:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬೆಳಗಾವಿಯ ನದಿಗಳೆಲ್ಲ ಉಕ್ಕಿಹರಿಯುತ್ತಿವೆ. ಹಳ್ಳ ಕೊಳ್ಳ ತುಂಬಿದ್ದು, ಒಂಟಮುರಿ‌ ಘಾಟಿ ಬಳಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಜಲಾವೃತಗೊಂಡಿದೆ.

ಪ್ರವಾಹದಿಂದ ಜನರು ದಿಕ್ಕೆಟ್ಟು ಹೋಗಿದ್ದಾರೆ. ನದಿ ಮತ್ತು ರಸ್ತೆಯ ವ್ಯತ್ಯಾಸ ಕಾಣುತ್ತಿಲ್ಲ. ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರು ನದಿಯಲ್ಲಿ ಪ್ರವಾಹ ಇಳಿಯಲು ಕಾಯುತ್ತಿದ್ದಾರೆ.

ಪ್ರಯಾಣಿಕರಿಗೆ ದಿಕ್ಕು ತೋಚದಂತೆ  ರಸ್ತೆ ಮೇಲೆ ನೀರು ಹರಿದು ಬಂದು ಇದು ನದಿನಾ ಅಥವಾ ರಸ್ತೆ ನಾ ಅಂತಾ ತಿಳಿಯದೇ ತಮ್ಮ ತಮ್ಮ ಸಣ್ಣ ವಾಹಾನಗಳು ರಸ್ತೆ ಬದಿಗೆ ನೀಲಿಸಿ ನೀರಿನ ರಭಸ ಕಡಿಮೇ ಆಗುವ ನೀರಿಕ್ಷೆಯಲ್ಲಿ‌ ಕಾದುಕೊಳ್ಳಿತ್ತಿದ್ದಾರೆ,

ಇನ್ನೂ ಲಾರಿ ಚಾಲಕರು ಭಾರ ಹೆಚ್ಚಿರುವುದರಿಂದ ನೀರಿನ ಮೇಲೆಯೇ ಸವಾರಿ ಮಾಡುತ್ತಿದ್ದಾರೆ. ಇಲ್ಲಿ ನೀರು ಹರಿದು‌ ಹೋಗಲು ಸರಾಗ ಮಾರ್ಗ ಇಲ್ಲದ ಕಾರಣ ರಸ್ತೆ ಮೇಲೆ ನೀರು ನುಗ್ಗಿ ಪ್ರತಿ ವರ್ಷ ವು ಮಳೆಗಾಲದಲ್ಲಿ‌ ಇಂಥಹ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು‌ ವಾಹನ ಶುಲ್ಕ ಭರಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಆಗುವ ಸಂಭವಗಳ ಬಗ್ಗೆ ‌ಗಮನ ಹರಿಸುವುದಿಲ್ಲ. ಕೇವಲ ಹಣ ಮಾಡಲು ಮಾತ್ರ ಈ ಹೆದ್ದಾರಿ ಸೀಮಿತವಾಗಿದೆ ಅಂತಾ ಹೇಳಿದರು‌ ತಪ್ಪೆನಿಲ್ಲ. ಇನ್ನಾದರೂ ಎಚ್ಚತ್ತುಕೊಂಡು‌ ಇಂತಹ ಸಮಸ್ಯೆಗಳನ್ನು ಆಲಿಸಿ ರಸ್ತೆ ಸಂಚಾರಕ್ಕೆ ಸುಗಮಗೊಳಿಸುತ್ತಾರಾ ಎಂದು ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು