11:36 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪದವಿ ತರಗತಿಗಳ ಪ್ರಾರಂಭೋತ್ಸವ

12/08/2023, 23:06

ಬಂಟ್ವಾಳ(reporterkarnataka.com)ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ ಕಾರ್ಮೆಲ್ ಕಾಲೇಜಿನಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ವಂ|ಭ| ರೊಸಿಲ್ಡ್, (ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾಸಂಸ್ಥೆಗಳು), ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಎಚ್. ಎಸ್ ಫೆರ್ನಾಂಡಿಸ್, ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ಹಾಗೂ ಹಳೆ ವಿದ್ಯಾರ್ಥಿನಿ ತೇಜಸ್ವಿ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳು, ಪ್ರಾಂಶುಪಾಲರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಪ್ರೊ. ಎಚ್. ಎಸ್. ಫೆರ್ನಾಂಡಿಸ್ ಮಾತನಾಡಿ ವಿದ್ಯಾರ್ಥಿಗಳು, ಹೆತ್ತವರು, ಆಡಳಿತ ಮಂಡಳಿ ಪರಸ್ಪರ ಅರಿತು ಹೊಂದಾಣಿಕೆಯಿಂದ ಶ್ರಮಿಸಿದರೆ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ ಹಾಗೂ ಶಿಸ್ತು ಬಹಳ ಮುಖ್ಯ ಎಂಬ ಸಂದೇಶವನ್ನು ನೀಡಿದರು. ಹಳೆ ವಿದ್ಯಾರ್ಥಿನಿ ತೇಜಸ್ವಿ ತಮ್ಮ 3 ವರ್ಷಗಳ ವಿದ್ಯಾರ್ಥಿ ಜೀವನದ ನೆನಪನ್ನು ಮೆಲುಕು ಹಾಕುತ್ತಾ, ನಾವು ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಅದೇ ರೀತಿ ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ಕಾಲೇಜಿನ ವಾರ್ಷಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ನಿಹಾರಿಕಾ ಶೆಟ್ಟಿ, ವಾಣಿಜ್ಯ ಉಪನ್ಯಾಸಕರು ಕಾರ್ಯಕ್ರಮವನ್ನು ನಿರೂಪಿಸಿದರು. ವಿಜೇತಾ, ವಾಣಿಜ್ಯ ಉಪನ್ಯಾಸಕರು ಸ್ವಾಗತಿಸಿದರು, ಕುಮಾರಿ ಅಲ್ವಿಶಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು