3:20 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ತುಳು ನೆಲದ ಝಳಕ್ ತೋರಿಸುವ ‘ಕೊರಮ್ಮ’: ಹಳೆ ತಲೆಮಾರಿನ ಬದುಕಿನ‌ ಕಥಾ ಹಂದರ

13/08/2023, 21:38

ಮಂಗಳೂರು(reporterkarnataka.com): ‘ಕೊರಮ್ಮ …ಎ ಹ್ಯೂಮನ್’ ಎನ್ನುವ ಟೈಟಲ್‌ನೊಂದಿಗೆ ಆರಂಭವಾಗುವ ಸಿನಿಮಾ ಇದು. ತುಳುನಾಡಿನ ಸಂಸ್ಕೃತಿ, ಭಾಷೆ, ಮಾನವೀಯ ಮೌಲ್ಯವನ್ನು ಒಂದು ಫ್ರೇಮ್ ನೊಳಗೆ ಕೊರಮ್ಮದಲ್ಲಿ ಸೆರೆ ಹಿಡಿಯುವ ಪ್ರಯತ್ನ ನಡೆದಿದೆ.
ಕೊರಮ್ಮದಲ್ಲಿ ಹಳೆ ತಲೆಮಾರಿನ ಸುಂದರ ಬದುಕನ್ನು ಅತೀ ಸುಂದರವಾಗಿ ಕಟ್ಟಿಕೊಡಲಾಗಿದೆ. ಇದರಲ್ಲಿ
ಈ ನೆಲದ ಕಥೆ ನೇತ್ರಾವತಿಯಂತೆ, ಕುಮಾರಧಾರೆಯಂತೆ,‌ ಫಲ್ಗುಣಿಯಂತೆ ಸರಾಗವಾಗಿ ಹರಿದು ಬರುತ್ತದೆ. ಮಾನವೀಯ ಮೌಲ್ಯ, ಸಂಬಂಧ, ಬಂಧುತ್ವವನ್ನು ಕಲಿಸಿಕೊಡುತ್ತದೆ. ತುಳುನಾಡಿನ ಜನರ ವಾಸ್ತವ ಜೀವನಕ್ಕೂ ಸಿನಿಮಾಕ್ಕೂ ತುಂಬಾ ನೆಂಟಸ್ತಿಕೆ ಕಂಡು ಬರುತ್ತದೆ.


ಜಾತಿ -ಧರ್ಮದ ಮೇಲಾಟದಲ್ಲಿ ಯುವಜನತೆ ಸಂಬಂಧಗಳನ್ನು ಕಡಿದು ಹೋಗಬಾರದು, ಕೊಂಡಿಯಂತೆ ಬೆಸೆದುಕೊಂಡು ಮುಂದೆ ಸಾಗಬೇಕು ಎಂಬ ಸಂದೇಶವನ್ನು ನಿರ್ದೇಶಕ ಶಿವಧ್ವಜ್ ಪ್ರೇಕ್ಷಕರಿಗೆ ನೀಡುವಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.
ಚಿತ್ರವನ್ನು ವೀಕ್ಷಿಸುವಾಗ ನಮ್ಮದೇ ಹಳ್ಳಿಯ ನಮ್ಮ ಮನೆಯಲ್ಲಿ ಕೂತಿರುವ ಭಾವನೆಯನ್ನು ಹೆಚ್ಚಿನ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿ ಸಾಂಪ್ರದಾಯಿಕ ಪರಿಕರಗಳನ್ನು ಬಳಸಲಾಗಿದೆ.
ಶುದ್ಧ ತುಳು ಭಾಷೆಯ ಪ್ರಯೋಗವಾಗಿದೆ. ಜಂಜಾಟದ ಬದುಕಿನ ಧಾವಂತದಲ್ಲಿ ನಾವೇನೋ ಕಳೆದುಕೊಳ್ಳುತ್ತಿದ್ದೇವೆ, ಹಾಗಾಗಬಾರದು ಎನ್ನುವುದನ್ನು ಸಿನಿಮಾ ಸಾರಿ ಸಾರಿ ಹೇಳುತ್ತದೆ.
ಪಾತ್ರಗಳ ನೂಕು ನುಗ್ಗಲು ಇಲ್ಲದ ಕೂರಮ್ಮದಲ್ಲಿ
ಸುರೇಶ್ ಬೈರಸಂದ್ರ ಅವರ
ಅದ್ಭುತ ಛಾಯಾಗ್ರಹಣವಿದೆ. ಒಳೆಯ ಸಂಗೀತವಿದೆ.
……………..

ಇತ್ತೀಚಿನ ಸುದ್ದಿ

ಜಾಹೀರಾತು