11:37 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್ ವಿರುದ್ಧ 3-2 ಅಂತರದ ಗೆಲುವು

24/07/2021, 11:23

ReporterKarnataka.com

ಹರ್ಮನ್‌ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್‌ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ ಭಾರತ ಹಾಕಿ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿ ಒಲಿಂಪಿಕ್ ಪಯಣವನ್ನು ಗೆಲುವಿನೊಂದಿಗೆ ಆರಂಭಿಸಿದೆ.

ನಾಲ್ಕನೇ ಶ್ರೇಯಾಂಕಿತ ಮನ್‌ಪ್ರೀತ್‌ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ಮೊದಲಿಗೆ ಹಿನ್ನೆಡೆಗೆ ಗುರಿಯಾದರು ಬಳಿಕ ದಿಟ್ಟ ಪ್ರದರ್ಶನದಿಂದ ಗೆಲುವಿನ ನಗೆ ಬೀರಿತು. ಪಂದ್ಯದ ಆರನೇ ನಿಮಿಷದಲ್ಲಿ ಕೀವಿಸ್‌ನ ಕೇನ್‌ ರಸೆಲ್ ತಮಗೆ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು.

ಇದರೊಂದಿಗೆ ನ್ಯೂಜಿಲೆಂಡ್ ಹಾಕಿ ತಂಡವು ಮೊದಲ ಕ್ವಾರ್ಟರ್‌ನ ಆರಂಭದಲ್ಲೇ 1-0 ಮುನ್ನಡೆ ಸಾಧಿಸಿತು. ಇದಾಗಿ ಕೆಲ ಹೊತ್ತಿನಲ್ಲೇ, ಅಂದರೆ ಪಂದ್ಯದ 10ನೇ ನಿಮಿಷದಲ್ಲಿ ರೂಪಿಂದರ್ ಪಾಲ್‌ ಗೋಲು ಬಾರಿಸುವ ಭಾರತದ ಗೋಲುಗಳ ಖಾತೆ ತೆರೆದರು. ಭಾನುವಾರ ಆಸ್ಟ್ರೇಲಿಯಾ ಜೊತೆ ಭಾರತ ತಂಡ ಪಂದ್ಯವಾಡುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು