3:17 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೆಂಗಳೂರು: ಶ್ರೀನಿವಾಸ ಪ್ರಭುಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ

15/08/2023, 21:49

ಬೆಂಗಳೂರು(reporterlarnataka.com): ಯಕ್ಷಗಾನದಿಂದ ಕನ್ನಡ ಭಾಷೆಯು ಇನ್ನಷ್ಟು ಜೀವಂತವಾಗಿರುತ್ತದೆ, ದೈಹಿಕ ಮಾನಸಿಕ ಸ್ವಾಸ್ಥ್ಯ ಕಾಪಾಡುವುದರಲ್ಲಿ ಯಕ್ಷಗಾನ ಅತ್ಯಂತ ಪ್ರಯೋಜನಕಾರಿ ಎಂದು ಎಂದು ಶಾಸಕ ರವಿ ಸುಬ್ರಹ್ಮಣ್ಯ ಹೇಳಿದರು.
ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಭಾನುವಾರ ಸೃಷ್ಟಿ ಕಲಾ ವಿದ್ಯಾಲಯದ 23ನೇ ಸೃಷ್ಟಿ ಸಂಭ್ರಮ ಅಂಗವಾಗಿ ಪ್ರಸಿದ್ಧ ಚೆಂಡೆವಾದಕ ಶ್ರೀನಿವಾಸ ಪ್ರಭು( ಗುಂಡ) ಅವರಿಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸೃಷ್ಟಿ ಕಲಾವಿದ್ಯಾಲಯವು ನಿರಂತರ ಯಕ್ಷಗಾನ ತರಬೇತಿ, ಕಲಾಸೇವೆ ಮೂಲಕ ಬಸವನ ಗುಡಿ ಕ್ಷೇತ್ರದ ಗೌರವವನ್ನು ಹೆಚ್ಚಿಸಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿದ ಶ್ರೀನಿವಾಸ ಪ್ರಭು, ಸೃಷ್ಟಿಯ ಈ ಪ್ರಶಸ್ತಿ ನನ್ನ ಕಲಾ ಬದುಕಿನಲ್ಲಿ ಅತ್ಯಂತ ಮಹತ್ವದ್ದು ಹಾಗೂ ಮರೆಯಲಾರದ್ದು ಎಂದರು.


ಸೃಷ್ಟಿ ಅಧ್ಯಕ್ಷ ಛಾಯಾಪತಿ ಕಂಚಿಬೈಲ್, ಗೌರವಾಧ್ಯಕ್ಷ ಶ್ರೀಕಾಂತ್ ಎಂ.ಜಿ., ಕಲಾವಿದರುಗಳಾದ ಸುಬ್ರಾಯ ಹೆಬ್ಬಾರ್, ಅಕ್ಷಯ ಆಚಾರ್ಯ ನಿತ್ಯಾನಂದ ನಾಯಕ್ , ಅರ್ಜುನ್ ಕೊರ್ಡೇಲ್, ಭರತ್ ರಾಜ್ ಪರ್ಕಳ ಇದ್ದರು.
ಈ ಸಂದರ್ಭ ಸುಬ್ರಾಯ ಹೆಬ್ಬಾರ್‌ ಮತ್ತು ಭರತ್‌ ರಾಜ್‌ ಪರ್ಕಳ ನಿರ್ದೇಶನದಲ್ಲಿ, ನಿತ್ಯಾನಂದ ನಾಯಕ್‌ ಪರಿಕಲ್ಪನೆಯಲ್ಲಿ ಸೃಷ್ಟಿ ಕಲಾ ವಿದ್ಯಾಲಯ ವಿದ್ಯಾರ್ಥಿಗಳಿಂದ ಕುಮಾರ ವಿಜಯ ಯಕ್ಷಗಾನ ಪ್ರದರ್ಶನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು