7:21 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಸ್ಕಿ: ಅಭಿನಂದನ್ ಸಂಸ್ಥೆಯಿಂದ ಕಾರ್ಗಿಲ್ ವಿಜಯ್ ಯಾತ್ರೆ; ಮೌನ ಪ್ರಾರ್ಥನೆ 

26/07/2021, 20:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಅಭಿನಂದನ್ ಸಂಸ್ಥೆಯ ವತಿಯಿಂದ ನೂರಾರು ಸೈನಿಕರ ಬಲಿದಾನದಿಂದಾಗಿ ದೊರೆತಂತಹ ಕಾರ್ಗಿಲ್ ಯುದ್ಧದಲ್ಲಿನ ವಿಜಯದ ನೆನಪಿಗಾಗಿ ಮಸ್ಕಿಯ ದೈವದ ಕಟ್ಟೆಯಿಂದ ವಿಜಯ್ ಯಾತ್ರೆಯನ್ನು ಕೈಗೊಳ್ಳಲಾಯಿತು. ಯುದ್ಧದಲ್ಲಿ ಮರಣ ಹೊಂದಿದ  ಯೋಧರಿಗೆ ಮೌನಾಚರಣೆಯ ಮೂಲಕ ಅವರ ಆತ್ಮಕ್ಕೆ ಶಾಂತಿಯನ್ನು ಕೋರಲಾಯಿತು. ಈ ಸಮಯದಲ್ಲಿ ಮಾತನಾಡಿದ ಯುವ ನಾಯಕರಾದ ಮೌನೇಶ ನಾಯಕ, 1999 ರಲ್ಲಿ ಪಾಕಿಸ್ತಾನದೊಂದಿಗೆ ನಡೆದ ಯುದ್ಧದಲ್ಲಿ ಭಾರತವು ಗಳಿಸಿದ ಯಶಸ್ಸನ್ನು ಆಚರಿಸುತ್ತಾ ಹಾಗೂ ಆ ಗೆಲುವಿಗಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಬಲಿದಾನವನ್ನು ಸ್ಮರಿಸುತ್ತಾ ನಮ್ಮ ದೇಶದ ಕೀರ್ತಿಯನ್ನು ಹೆಚ್ಚಿಸುವ ಕಾರ್ಯಗಳನ್ನು ಮಾಡಬೇಕು. ಈ ನಿಟ್ಟಿನಲ್ಲಿ ಇಂತಹ ಕೀರ್ತಿದಾಯಕ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಅಭಿನಂದನ್ ಸಂಸ್ಥೆಯು ಸತತವಾಗಿ ಸಾಮಾಜಿಕ ಸೇವೆಯ ಜೊತೆಗೆ ಪರಿಸರ ಸಂರಕ್ಷಣಾ ಕಾರ್ಯಗಳ ಮೂಲಕ ದೇಶ ಸೇವೆಯನ್ನು ಮಾಡುತ್ತಿರುವುದು ನಮ್ಮ ಮಸ್ಕಿಗೆ ಹೆಮ್ಮೆ ತರುವ ವಿಷಯವಾಗಿದೆ ಎಂದು ಹೇಳಿದರು. 

ಭಾರತ ಮಾತೆಗೆ ಪುಷ್ಪಾರ್ಪಣೆ ಮಾಡಿ ವಿಜಯೋತ್ಸವ ಆಚರಿಸಿ ನಂತರ ವೀರ ಯೋಧರಿಗೆ ಮೌನಾಚರಣೆಯ ಮೂಲಕ ಆತ್ಮಕ್ಕೆ ಶಾತಿಯನ್ನು ಕೋರಿ ಅಭಿನಂದನ್ ಗುರುಕುಲದ ಮಕ್ಕಳ ಜೊತೆಗೆ ಮಸ್ಕಿಯ ದೈವದ ಕಟ್ಟೆಯಿಂದ ಮಸ್ಕಿಯ ಪ್ರಮುಖ ರಸ್ತೆಯ ಮೂಲಕ ವಿಜಯ ಯಾತ್ರೆಯನ್ನು ಕೈಗೊಳ್ಳಲಾಯಿತು. ಈ ವಿಜಯ ಯಾತ್ರೆಯಲ್ಲಿ ಮಸ್ಕಿಯ ಗಣ್ಯರಾದ ಸೂಗಣ್ಣ ಬಾಳೇಕಾಯಿ, ವೆಂಕಟೇಶ ನಾಯಕ, ನಾಗರಾಜ ಯಂಬಲದ, ಮಹಾಂತೇಶ ಬ್ಯಾಳಿ, ಶಿವಪ್ರಸಾದ ಕ್ಯಾತನಟ್ಟಿ, ವಿನೋದ ಹಳ್ಳಿ, ರಾಕೇಶ ಪಾಟೀಲ್, ಅಮರೇಶ ಹರಸೂರು, ಶಿವಕುಮಾರ ಸ್ವಾಮಿ, ಅಭಿನಂದನ್ ಸಂಸ್ಥೆಯ ಸಂಸ್ಥಾಪಕರಾದ ರಾಮಣ್ಣ ಹಂಪರಗುಂದಿ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಮತ್ತು ಮಸ್ಕಿಯ ನಾಗರೀಕರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು