9:43 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ ರಾಜಕಾರಣಿ!!

27/07/2021, 22:50

ಬೆಂಗಳೂರು(reporterkarnataka news): ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಗೊಂಡಿದ್ದಾರೆ. ಕರಾವಳಿಯ ಉಡುಪಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಈಗ ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದಾರೆ.

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುವ ಮೂಲಕ ರಾಜ್ಯದಲ್ಲಿ ಮಾತೃಪಕ್ಷವನ್ನು ತೊರೆದು ಬಂದವರಲ್ಲಿ ಇಬ್ಬರು ಮುಖ್ಯಮಂತ್ರಿ ಆದ್ದಂತಾಗಿದೆ. ಮೊದಲನೆಯದಾಗಿ ಸಿದ್ದರಾಮಯ್ಯ ಅವರು ಜನತಾ ಪರಿವಾರದಿಂದ ಹೊರ ಬಂದು ಕಾಂಗ್ರೆಸ್ ಸೇರಿದ ಬಳಿಕ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯಿತು. ಬಸವರಾಜ ಬೊಮ್ಮಾಯಿ ಅವರು ಕೂಡ ತನ್ನ ಮಾತೃಪಕ್ಷವಾದ ಜನತಾ ಪರಿವಾರದಿಂದ ಹೊರ ಬಂದು ಬಿಜೆಪಿ ಸೇರಿದ ಬಳಿಕ ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಮುಖ್ಯಮಂತ್ರಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು 2006ರಲ್ಲಿ ಜೆಡಿಎಸ್ ಯಿಂದ ಹೊರಗಡೆ ಬಂದು 2013ರಲ್ಲಿ ಕಾಂಗ್ರೆಸ್ ನಿಂದ ಮುಖ್ಯಮಂತ್ರಿಯಾದರು. 2008ರಲ್ಲಿ ಜೆಡಿಎಸ್ ಬಿಟ್ಟು ಬಿಜೆಪಿಗೆ ಬಂದ ಬಸವರಾಜ ಬೊಮ್ಮಾಯಿ ಅವರು ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಜನತಾ ಪರಿವಾರದಿಂದ ಬಂದ ಎಸ್. ಆರ್. ಬೊಮ್ಮಾಯಿ ಅವರ ಪುತ್ರ. ಜನತಾ ಪರಿವಾರದಿಂದ ಹೊರ ಬಂದ ಬಳಿಕ ಅವರು ರಾಜಕೀಯವಾಗಿ ಆಯ್ಕೆ ಮಾಡಿಕೊಂಡಿರುವುದು ಬಿಜೆಪಿ ಪಕ್ಷವನ್ನು. ಯಡಿಯೂರಪ್ಪ ಅವರ ಮೊದಲ ಸರಕಾರದಲ್ಲಿಯೂ ಬೊಮ್ಮಾಯಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರ ತಂದೆ ಎಸ್. ಆರ್. ಬೊಮ್ಮಾಯಿ ಅವರು ಜನತಾ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಬೊಮ್ಮಾಯಿ ಸರಕಾರವನ್ನು ವಜಾಗೊಳಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿತ್ತು. ಇದರ ವಿರುದ್ಧ ಸುಪ್ರೀಂಕೊರ್ಟ್ ಗೆ ಮೊರೆ ಹೋಗಲಾಗಿತ್ತು. ಬೊಮ್ಮಾಯಿ ಸರಕಾರವನ್ನು ವಜಾಗೊಳಿಸಿದ ಕೇಂದ್ರದ ಕ್ರಮ ಅಸಿಂಧು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಅಷ್ಟೊತ್ತಿಗೆ ಬೇರೆ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು