11:30 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಜಂಗಮರೆಂದರೆ ಯಾರು?

08/10/2023, 20:32

ಜಂಗಮರೆಂದರೆ ಯಾರು? ಯಾರು??
ಯಾರು? ಯಾರು?? ಜಂಗಮರೆಂದರೆ!! ಪ!!
ಎಲ್ಲವನ ಕೊಟ್ಟು ಇಹದೆಲ್ಲವನ ಬಿಟ್ಟು
ಬಲ್ಲಿದನ ಜೋಳಿಗೆಯ ಕರದಲಿ ಪಿಡಿದು
ಕಲ್ಲು ಮನಸುಗಳ ಹೂವಾಗಿಸುವದೆಡೆಗೆ
ಮಲ್ಲಿನಾಥನ ಮಗನಾಗಿ ಯೋಗಿಯಾದವರೆ!! ಜಂಗಮ!!

ಬಣ್ಣ ಬಣ್ಣಗಳ ಕನಸುಗಳನೆಲ್ಲ ತೊರೆದು
ಬಿನ್ನಹದಿಂದಲೆ ಜೀವನದ ಸಾರವ ಸಾರೊ
ಕಣ್ಣು ಕಣ್ಣುಗಳ ತೆರೆಸೊ ಜ್ಞಾನ ಭಂಡಾರವು
ಹುಣ್ಣುಮೆಯ ತಂಪನೇ ಚೆಲ್ಲೊ ಕಾಂತಿಯೆ!! ಜಂಗಮ!!

ಬದುಕಿನ ತಿರುಳನ್ನು ವಚನದಲಿ ಸಾರುತ್ತ
ಹೃದಯಗಳಲಿ ಅಮೃತವನೆ ಧಾರೆಯೆರೆವ
ಹದಿಬದೆಯ ಧರ್ಮದ ತಿರುಳನೆ ಬಿತ್ತುವ
ವಿಧಿತದಲಿ ಸರ್ವರಾ ಬಾಳನೆ ಬೆಳಗುವವರೆ!! ಜಂಗಮ!!

ಕಾಮ ಕ್ರೋಧ ಲೋಭ ಮೋಹ ಮತ್ಸರವ
ಯಾಮದಿಂದಲೆ ತೊರೆದು ಸಾಧುವಾಗಿಹ
ಸೋಮ ಸೂರ್ಯರಂತೆಯೆ ಜಗ ಕಾಯುವ
ನಾಮ ನಿರ್ದೇಶಿತ ಕಾವಿಯ ಕಾರ್ಮಿಕರೆ!! ಜಂಗಮ!!

– ಅನಿತಾ ಸಾಲಿಮಠ ಅಂತರಗಂಗೆ
(ವಿದ್ಯಾ ಚೇತನ ಪದವಿ ಪೂರ್ವ ಕಾಲೇಜು ಲಿಂಗಸೂರ್)

ಇತ್ತೀಚಿನ ಸುದ್ದಿ

ಜಾಹೀರಾತು