3:26 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿ 5 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿ ಪರಾರಿ: ಹಾಡಹಗಲೇ ಇಬ್ಬರು ಯುವಕರಿಂದ ಕೃತ್ಯ

29/07/2021, 16:59

ಶರಣೇ ಗೌಡ ಸಿಂಧನೂರು ರಾಯಚೂರು
info.reporterkarnataka@gmail.com

ಚಿನ್ನದ ವಸ್ತುಗಳನ್ನು ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿದ ಯುವಕರ ತಂಡವೊಂದು ಹಾಡಹಗಲೇ ಚಿನ್ನದ ಆಭರಣಗಳೊಂದಿಗೆ ಪರಾರಿಯಾದ ಘಟನೆ 

ಸಿಂಧನೂರು ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಪಟ್ಟಣದ ಬಳಗಾನೂರು ರಸ್ತೆ ಸಮೀಪದಲ್ಲಿ ಇರುವ ನಿವೃತ್ತ ಶಿಕ್ಷಕ ಯಲ್ಲಪ್ಲ ಜಾಲಿಹಾಳ  ನಿವಾಸಕ್ಕೆ ಬೆಳಗ್ಗೆ  ಬೈಕ್ ಮೇಲೆ ಆಗಮಿಸಿದ ಇಬ್ಬರು ಯುವಕರು ತಾವು ಚಿನ್ನದ ಅಭರಣಗಳನ್ನು ಪಾಲಿಷ್ ಮಾಡಿಕೊಡುತ್ತೇವೆ ಎಂದು ನಂಬಿಸಿದ್ದಾರೆ, ಅಡಿಗೆ ಮಾಡುವ ಕುಕ್ಕರನಲ್ಲಿ ಚಿನ್ನ ಹಾಕಿ ಕೊಡಿ ಎಂದು ವಂಚಕರು ಹೇಳಿದಾಗ ಕುಟುಂಬದ ಸದಸ್ಯರು ಕುಕ್ಕರನಲ್ಲಿ 10 ತೊಲೆಯ ಚಿನ್ನದ ಆಭರಣಗಳನ್ನು ಹಾಕಿ ಕೊಟ್ಟಿದ್ದಾರೆ. ಕುಕ್ಕರ್ ಕಾಯಿಸುವ ವೇಳೆ  ಕುಟುಂಬದ ಸದಸ್ಯರಿಗೆ ಯಾಮಾರಿಸಿದ ವಂಚಕರ ತಂಡ  5 ಲಕ್ಷ ಬೆಲೆ ಬಾಳುವ 10 ತೊಲೆ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ.  ಇದರಿಂದ ಗಾಬರಿಗೊಂಡ ಯಲ್ಲಪ್ಪ ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಮುಟ್ಟಿಸಿದ್ದಾರೆ. ‌ ಸ್ಥಳಕ್ಕೆ ದೌಡಾಯಿಸಿದ ಸಬ್ ಇನ್ ಸ್ಪೆಕ್ಟರ್ ಭೀಮದಾಸ್ ತನಿಖೆ ಕೈಗೊಂಡಿದ್ದಾರೆ.

ಹಾಡು ಹಗಲೇ ಪಟ್ಟಣದಲ್ಲಿ  ಮನೆಗಳಿಗೆ ಹೋಗಿ, ವಂಚಿಸಿ ಚಿನ್ನದ ಆಭರಣಗಳನ್ನು ಕಳವು ಮಾಡುತ್ತಿದ್ದರಿಂದ ಸಾರ್ವಜನಿಕರಲ್ಲಿ ಅತಂಕ ಸೃಷ್ಟಿಯಾಗಿದೆ. ಪೊಲೀಸ್ ಇಲಾಖೆ ವಂಚಕರ ಜಾಲ ಬಯಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು