12:32 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್: ಕೊಂಕಣಿ ಫೋಕ್ ಲೋರ್ ಅಂಡ್ ಡಾನ್ಸ್ ತರಬೇತಿಗೆ ಚಾಲನೆ

03/11/2023, 10:14

ಮಂಗಳೂರು(reporterkarnataka.com): ಕೆನರಾ ಕಾಲೇಜಿನಲ್ಲಿ ಕೊಂಕಣಿ ಭಾಷಾ ವಿದ್ಯಾರ್ಥಿ ಮಂಡಲ ಕೆನರಾ ಕಾಲೇಜು ಹಾಗೂ ಕೊಂಕಣಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕೊಂಕಣಿ ಸ್ನಾತಕೋತ್ತರ ವಿಭಾಗ ಮಂಗಳೂರು ವಿಶ್ವವಿದ್ಯಾಲಯ ಇವುಗಳ ಜಂಟಿ
ಆಶ್ರಯದಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್, ಕೊಂಕಣಿ ಫೋಕ್ ಲೋರ್ ಅಂಡ್ ಡಾನ್ಸ್ ತರಬೇತಿಗೆ ಡಾ. ದೇವದಾಸ್ ಪೈ ಅವರು ದೀಪ ಬೆಳಗಿಸುವ ಮೂಲಕ ಚಾಲನೆಯನ್ನಿತ್ತರು.
“ಮೂಲತ: ಉತ್ತರ ಭಾರತದ ಸರಸ್ವತಿ ನದಿ ತೀರದವರಾದ ಗೌಡ ಸಾರಸ್ವತ ಬ್ರಾಹ್ಮಣರು ಗೋವಾದಲ್ಲಿ ನೆಲೆ ನಿಂತು ತಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನೆಲ್ಲ ಉಳಿಸಿ ಬೆಳೆಸಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ವ್ಯಾಪಾರದ ನೆಪವಿಟ್ಟುಕೊಂಡು ಭಾರತಕ್ಕೆ ಆಗಮಿಸಿದ ಪೋರ್ಚುಗೀಸರ ಆಕ್ರಮಣವನ್ನು ತಾಳಲಾರದೆ ಹೆದರಿ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳ ಬೇಕೆಂಬ ಮಹಾದಾಸೆಯಿಂದ ದಕ್ಷಿಣದ ಕರಾವಳಿ ಪ್ರದೇಶದಲ್ಲಿ ನೆಲೆ ನಿಂತರು. ಇಂದಿಗೂ ಇವರು ತಮ್ಮಆಚಾರ ವಿಚಾರ ಸಂಪ್ರದಾಯಗಳನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವುದು ಗಮನಾರ್ಹ “ಎಂದು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ. ಅವರು ಕೊಂಕಣಿ ಭಾಷೆಯಲ್ಲಿ ಎಂ.ಎ, ಪಿ ಎಚ್ ಡಿ ಪದವಿಯನ್ನು ಮಾಡಿದಲ್ಲಿ ವಿಪುಲ ವೃತ್ತಿಪರ ಅವಕಾಶಗಳು ಇರುವುದು. ಅದಕ್ಕೆ ಇಂತಹ ಸರ್ಟಿಫಿಕೇಟ್ ಕೋರ್ಸ್ ಸ್ಪೂರ್ತಿದಾಯಕವಾಗುವುದು ಎಂದು ನುಡಿದರು.
ಶ್ವೇತಾ ಕಾಮತ್ ಪ್ರಾರ್ಥಿಸಿದರು. ಕೊಂಕಣಿ ಭಾಷಾ ವಿದ್ಯಾರ್ಥಿ ಮಂಡಲ ಹಾಗೂ ಕೊಂಕಣಿ ಕೋರ್ಸ್ ಸಂಯೋಜಕಿಯಾದ ಸುಜಾತಾ ಜಿ.ನಾಯಕ್ ಸ್ವಾಗತಿಸಿದರು. ಸಹ ಸಂಯೋಜಕಿ ಕೀರ್ತನಾ ಎಂ. ಭಟ್ ಅವರು ವಂದಿಸಿದರು. ವರದರಾಜ ಭಕ್ತ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು