12:37 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಡಿ. 28: ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಕುದ್ರೋಳಿ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಉಚಿತ ಸಾಮೂಹಿಕ ವಿವಾಹ

13/11/2023, 19:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಡಿ.28ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ನ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಹೇಳಿದರು.
ಅವರು ಕೊಟ್ಟಿಗೆಹಾರದ ನಿಸರ್ಗ ಗ್ರ್ಯಾಂಡ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಲೆನಾಡಿನ ಭಾಗದಲ್ಲಿ ಹಿಂದು ಬಡ ಕುಟುಂಬದ ವಧುವರರಿಗೆ ವಿವಾಹ ಮಾಡಲು ಟ್ರಸ್ಟ್ ಮುಂದೆ ಬಂದಿದ್ದು, 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ ನಡೆಸಲು ತೀರ್ಮಾನಿಸಿದ್ದೇವೆ. ಈಗಾಲೇ 5 ಜೋಡಿಗಳು ಸಾಮೂಹಿಕವಾಗಿ ವಿವಾಹವಾಗಲು ಮುಂದೆ ಬಂದಿವೆ. ಇನ್ನೂ 7 ಜೋಡಿಗಳ ಅವಶ್ಯಕತೆಯಿದೆ. ಅದಲ್ಲದೇ ಮೂರು ಆಸಕ್ತ ಬಡ ಕುಟುಂಬಗಳಿಗೆ ಮನೆ ಹಸ್ತಾಂತರ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದೇವೆ. ಸಂಘಟನೆ ವತಿಯಿಂದ ನೂತನ ವಧುವರರಿಗೆ ಒಂದು ಪವನ್ ಚಿನ್ನದ ಕರಿಮಣಿ ಮತ್ತು ಉಡುಪುಗಳನ್ನು ನೀಡಲಾಗುವುದು’ಎಂದರು. ಅಖಿಲ ಕರ್ನಾಟಕ ರಾಜ ಕೇಸರಿ ಸಂಸ್ಥೆಯ ಗೌರವ ಸಲಹೆಗಾರ ಪ್ರೇಮ್ ರಾಜ್ ರೋಷನ್ ಸಿಕ್ವೇರಾ ಮಾತನಾಡಿ ‘ ನಮ್ಮ ಟ್ರಸ್ಟ್ ನಿಂದ ಕೊರೋನಾ ಸಮಯದಲ್ಲಿ 85 ಶವ ಸಂಸ್ಕಾರ, ಒಂದೇ ದಿನದಲ್ಲಿ 500 ನೇತ್ರ ನೋಂದಾವಣೆ, ಸೂರು ಇಲ್ಲದವರಿಗೆ 34 ಮನೆಗಳಿಗೆ ಆಸರೆ ನೀಡಿದ್ದೇವೆ. ಅನಾರೋಗ್ಯ ಪೀಡಿತರಿಗೆ ಸಹಾಯಾಸ್ತ ಮಾಡಿದ್ದೇವೆ. ವಿವಿಧ ಕ್ಷೇತ್ರದಲ್ಲಿ ನಮ್ಮ ಸಂಸ್ಥೆಯಿಂದ ಸಾಮಾಜಿಕ ಸೇವೆ ನೀಡಿದ್ದೇವೆ’ ಎಂದರು. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸಂಜಯ್ ಗೌಡ ಮಾತನಾಡಿ ‘ಮಲೆನಾಡಿನ ಬಡ ಹಿಂದು ಯುವಕರಿಗೆ ನೆರವಾಗಲು ಈ ಸಂಸ್ಥೆ ಮುಂದೆ ಬಂದಿದೆ.ನಮ್ಮ ಮಲೆನಾಡಿನ ಯುವಕರು ಸಾಮೂಹಿಕವಾಗಿ ವಿವಾಹವಾಗಲು ಯೋಚಿಸಿದ್ದರೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9686714110/9901947498 ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು
ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು