4:48 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ದ. ಕ. ಜಿಲ್ಲೆಯಲ್ಲಿ ದಿನಕ್ಕೆ ಸುಮಾರು 1 ಲಕ್ಷ ಲೀಟರ್‌ನಷ್ಟು ಹಾಲಿನ ಕೊರತೆ: ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ ಕಾರ್ಯಾಗಾರದಲ್ಲಿ ಬಹಿರಂಗ

17/11/2023, 23:33

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಕ್ಕೆ ಸುಮಾರು ಒಂದು ಲಕ್ಷ ಲೀಟರ್‌ನಷ್ಟು ಹಾಲಿನ ಉತ್ಪಾದನಾ ಕೊರತೆಯಿದ್ದು, ಈ ಕೊರತೆಯನ್ನು ಸರಿದೂಗಿಸಲು ಹೈನುರಾಸುಗಳಿಗೆ ಕೊಡುವ ಆಹಾರ ಮತ್ತು ಪೋಷಕಾಂಶಗಳ ಸಮತೋಲನ ಬಳಕೆಯ ಬಗ್ಗೆ ರೈತರು ಹೆಚ್ಚು ಗಮನ ಹರಿಸಬೇಕೆಂದು ಪಶು ಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹೇಳಿದರು.


ಪಶುವೈದ್ಯರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ’ ಕುರಿತ ವಿಷಯದಲ್ಲಿ ಒಂದು ದಿನದ ತಾಂತ್ರಿಕ
ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿಜ್ಞಾನಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ.ಜೆ. ರಮೇಶ ಮಾತನಾಡಿ, ರೈತರು ಮೇವಿನ ಪರ್ಯಾಯ ಮೂಲಗಳ ಬಗ್ಗೆ ಹೆಚ್ಚು ಗಮನ ಹರಿಸಲು ಸೂಚಿಸಿದರು.
ಸಮಾರಂಭದ ಉದ್ಘಾಟನೆಯನ್ನು ಕ.ಪ.ಪ.ಮೀ.ವಿ.ವಿ. ವಿಸ್ತರಣಾ ನಿರ್ದೇಶಕ ಡಾ.ಎಸ್.ಆರ್. ಸೋಮಶೇಖರ್ ನೆರವೇರಿಸಿದರು
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎನ್‌.ಕೆ.ಎಸ್‌.ಗೌಡ, (ಮುಖ್ಯಸ್ಥರು, ಪ್ರಾಣಿ ಆಹಾರ ವಿಭಾಗ), ಡಾ. ಗಿರಿಧರ್, (ಮುಖ್ಯ ವಿಜ್ಞಾನಿಗಳು, ರಾಷ್ಟ್ರೀಯ ಪಶು ಮೋಷಣೆ ಮತ್ತು ಶರೀರಕ್ರಿಯಾ ವಿಜ್ಞಾನ ಸಂಸ್ಥೆ,ಐ.ಸಿ.ಎ.ಆರ್‍, ಆಡುಗೋಡಿ ಬೆಂಗಳೂರು) ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಐ.ಸಿ.ಎ.ಆರ್.-ಗೇರು, ನಿರ್ದೇಶನಾಲಯ, ಪುತ್ತೂರು ಇವರ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಪರಿಶಿಷ್ಟ ಜಾತಿ ರೈತರಿಗೆ ಹಸುಗಳಿಗೆ ಕೊಟ್ಟಿಗೆಯಲ್ಲಿ ಬಳಸುವ ರಬ್ಬರ್‌ಮ್ಯಾಟ್‌ಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಡಾ. ಶಿವಕುಮಾರ್, ಆರ್, (ಸಹಾಯಕ
ಪ್ರಾಧ್ಯಾಪಕರು (ಪ್ರಾಣಿ ಶಾಸ್ತ್ರ) ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು), ಇವರು ಸಂಯೋಜನೆ ಮಾಡಿದ್ದು, ಡಾ.ಮೋಹನ್‌, ಜಿ.ಎಸ್‌.(ಮುಖ್ಯ ವಿಜ್ಞಾನಿಗಳು, ಹಾಗೂ ಡಾ. ಮಂಜೇಶ, ವಿಜ್ಞಾನಿಗಳು, ಗೇರು ನಿರ್ದೇಶನಾಲಯ, ಪುತ್ತೂರು) ಹಾಗೂ ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು