3:29 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ; ನೆಹರೂ ಭಾವಚಿತ್ರಕ್ಕೆ ಪುಷ್ಪನಮನ

19/11/2023, 10:57

ಕಾರ್ಕಳ(reporterkarnataka.com): ಕಾರ್ಕಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾಣೂರು ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು.
ಸಾಣೂರು ಗ್ರಾಮ ಪಂಚಾಯತ್ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಕ್ಕಳ ದಿನಾಚರಣೆಯನ್ನು ಜ್ಯೋತಿ ಪ್ರಜ್ವಲನದ ಮೂಲಕ ಮಂಗಳೂರು ಕೆಎಂಎಫ್ ನಿರ್ದೇಶಕರು ಮತ್ತು ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರ ಸಾಣೂರು ನರಸಿಂಹ ಕಾಮತ್ ಉದ್ಘಾಟಿಸಿದರು.
ಮಕ್ಕಳಿಗೆ ನಾವು ನೀಡುವ ಪ್ರೀತಿ ಮತ್ತು ಕಾಳಜಿ ನಾಳೆ ನಮ್ಮ ದೇಶದ ಭವಿಷ್ಯವಾಗಿ ಅರಳುತ್ತದೆ. ಮಕ್ಕಳ ಮನಸ್ಸು ಯಾವಾಗಲೂ ದೀಪ ಬೆಳಗಿದ ಹಾಗೆ ಬೆಳಗಲಿ, ಮಕ್ಕಳ ಜೊತೆಗೆ ನಮ್ಮೆಲ್ಲರ ಜೀವನೋತ್ಸಾಹ ಇಮ್ಮಡಿಯಾಗಲಿ ಎಂದು ಶುಭ ಹಾರೈಸಿದರು.
ನಮ್ಮ ದೇಶದ ಮೊದಲ ಪ್ರಧಾನಿ ಜವಾಹರ
ಲಾಲ್ ನೆಹರೂ ರವರ ಜನ್ಮದಿನದ ನೆನಪಿಗಾಗಿ ಆಚರಿಸುವ ಮಕ್ಕಳ ದಿನಾಚರಣೆ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ಉಮಾ ಇವರು ಮಾತನಾಡಿ ಮಣ್ಣಿನ ಮುದ್ದೆಯಂತಿರುವ ಮಕ್ಕಳನ್ನು ಅಂಗನವಾಡಿಯಲ್ಲಿ ಶಾಲಾ ಪೂರ್ವ ಶಿಕ್ಷಣದ ಮೂಲಕ ಅವರ ಭವಿಷ್ಯ ರೂಪಗೊಳ್ಳುವುದು ಎಂದರು.
ಸಾಣೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಪುಲ್ಕೇರಿ ಅಂಗನವಾಡಿಯಲ್ಲಿ ಅತಿ ಹೆಚ್ಚು ಮಕ್ಕಳ ಸಂಖ್ಯೆಯಿದ್ದು, ವರ್ಷವಿಡಿ ಮಕ್ಕಳ ಮನೋವಿಕಾಸಕ್ಕಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಮುದಾಯದ ಸಹಭಾಗಿತ್ವದೊಂದಿಗೆ ಹಮ್ಮಿಕೊಳ್ಳುತ್ತಿರುವುದು ಸಂತಸದಾಯಕ ವಿಚಾರಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಹೆದ್ದಾರಿ ವಿಸ್ತರಣೆ ಯಾಗುವಾಗ ಅಂಗನವಾಡಿ ಕೇಂದ್ರದ ನಿವೇಶನ ಮತ್ತು ಕಟ್ಟಡ ಭೂಸ್ವಾಧೀನಗೊಂಡಿದ್ದು,
ಪ್ರಸ್ತುತ ಹತ್ತಿರದಲ್ಲಿರುವ ಹಳೆ ಸರಕಾರಿ ಶಾಲಾ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದೆ. ಈಗಾಗಲೇ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಫುಲ್ಕೇರಿ ಫ್ರೆಂಡ್ಸ್ ಕ್ಲಬ್ ಕಟ್ಟಡದ ಪಕ್ಕದಲ್ಲಿಯೇ ಹೊಸ ಸರಕಾರಿ ನಿವೇಶನ ಮಂಜೂರಾಗಿದ್ದು ಆದಷ್ಟು ಶೀಘ್ರ ಇಲಾಖೆಯ ವತಿಯಿಂದ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯ
ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ಪಂಚಾಯತ್ ಉಪಾಧ್ಯಕ್ಷರಾದ ಯಶೋಧಾ ಶೆಟ್ಟಿ, ಪಂಚಾಯತ್ ಸದಸ್ಯರಾದ ವಸಂತ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಪ್ರಿಯಾ , ಪ್ರಾಥಮಿಕ ಆರೋಗ್ಯ ಇಲಾಖೆ ಇರ್ವತ್ತೂರು ಇಲ್ಲಿಯ ಆರೋಗ್ಯ ಸಹಾಯಕಿ ಸಂಗೀತಾ, ಸಿಎಚ್ಒ ಸಂಧ್ಯಾ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಅಂಗನವಾಡಿ ಶಿಕ್ಷಕಿ ಸಾಕಮ್ಮ ಕಾರ್ಯಕ್ರಮವನ್ನು ನಿರೂಪಿಸಿದರು. ಅಂಗನವಾಡಿಯ ಪುಟಾಣಿ ಮಕ್ಕಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ, ಕಾರ್ತಿಕ ಮಾಸದ ದೀಪೋತ್ಸವದ ಪ್ರಯುಕ್ತ ಮಣ್ಣಿನ ಹಣತೆಗಳನ್ನು ಬೆಳಗಿ ಶಿಶು ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು