11:29 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

20/11/2023, 21:55

ಶಿವಮೊಗ್ಗ(reporterkarnataka.com): ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಇದರ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಮಂಗಳಾ ಆಸ್ಪತ್ರೆಯ ಆಯುರ್ವೇದ ಹಾಗೂ ಮೂಲವ್ಯಾಧಿ ಕ್ಷಾರ ಚಿಕಿತ್ಸಾ ತಜ್ಞ ಮತ್ತು ಬರಹಗಾರ ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ದಿನಾಂಕ 19ನವೆಂಬರ್ 23 ಭಾನುವಾರದಂದು ಶಿವಮೊಗ್ಗದ ಕರ್ನಾಟಕ ಸಭಾಭವನದಲ್ಲಿ ಕರ್ನಾಟಕ ಮರು ನಾಮಕರಣದ ಸುವರ್ಣ ಸಂಭ್ರಮದ ನಿಮಿತ್ತ ಏರ್ಪಡಿಸಲಾಗಿದ್ದ ಪಂಚ ಭಾಷಾ ಕವಿಗೋಷ್ಠಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ವೇದಿಕೆ ಅಧ್ಯಕ್ಷ ಕೊಟ್ರೇಶ್ ಉಪ್ಪಾರ್, ಜಿಲ್ಲಾಧ್ಯಕ್ಷೆ ಡಾ. ಹಸೀನಾ ಕೆ. ಎಚ್., ರಂಜಾನ್ ದರ್ಗಾ, ನಾಗರಾಜ್ ದೊಡ್ಮನಿ, ಖ್ಯಾತ ಗಜಲ್ ಕವಿ ಸಿದ್ಧರಾಮ‌ ಹೊನ್ಕಲ್, ಮಂಗಳೂರಿನ‌ ನ್ಯಾಯವಾದಿ, ಕವಯಿತ್ರಿ ವೇದಿಕೆಯ ಉಪಾಧ್ಯಕ್ಷೆ ಪರಿಮಳಾ ಮಹೇಶ್, ಉಳುವಂಗಡ ಕಾವೇರಿ ಉದಯ, ಬಿ.ಎಂ. ಬಶೀರ್, ನಾಗೇಶ್ ಎಂ ಅನ್ವೇಕರ, ಉಳ್ಳಾಲದ ಆರಕ್ಷಕ ಇಲಾಖೆಯ ಮನ್ಸೂರ್ ಮುಲ್ಕಿ,ಲತಾ ಎಂ. ಕೆ. ತುರುವೇಕೆರೆ, ಜೆ. ಜಿ. ನರಸಿಂಹ ಮೂರ್ತಿ ಮತ್ತಿತರ ಹಲವು ಗಣ್ಯರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು